<p>ಬೆಂಗಳೂರು ಮಾತ್ರವಲ್ಲದೇ ಇತರೆಡೆ ಹೆಚ್ಚಿರುವ ಬೀದಿ ನಾಯಿಗಳ ಸಮಸ್ಯೆ ನಿವಾರಿಸಲು ರಾಜ್ಯದಲ್ಲಿ ಎರಡು ಕಡೆ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼಗಳು ಸ್ಥಾಪನೆಯಾಗಲಿವೆ.</p>.<p>ಇದರಡಿ ಬೆಂಗಳೂರು ಹಾಗೂ ಬೀದರ್ ಪಶು ಮಹವಿದ್ಯಾಲಯದ ಪಶುವೈದ್ಯರು ಮತ್ತು ಪಶುವೈದ್ಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲಾಗುತ್ತದೆ. ಇದರಿಂದ ರಾಜ್ಯದಲ್ಲಿ ವೈಜ್ಞಾನಿಕ ಹಾಗೂ ಪರಿಣಾಮಕಾರಿ ಸಂತಾನಹರಣ ನಿಯಂತ್ರಣ ಜಾರಿಗೆ ಸಹಕಾರಿಯಾಗಲಿದೆ. </p>.<p>ಇದಲ್ಲದೇ ಪಶುಗಳ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಬೆಂಗಳೂರು ಹಾಗೂ ಬೀದರ್ ಪಶುವೈದ್ಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರು ಸಿ.ಟಿ.ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.</p>.<p><strong>ವನ್ಯಜೀವಿ ಸಂಘರ್ಷ ತಡೆಗೆ ₹ 1,500 ಕೋಟಿ:</strong> ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳ ಗ್ರಾಮಾಂತರ ಪ್ರದೇಶದಲ್ಲಿ ಮಾನವ–ವನ್ಯಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶದಿಂದ ʻಕರ್ನಾಟಕ ಮಾನವ–ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆ ಪ್ರಕಟಿಸಲಾಗಿದೆ.</p>.<p>ಮುಂದಿನ ಐದು ವರ್ಷದಲ್ಲಿ ₹ 1,500 ಕೋಟಿ ವೆಚ್ಚದಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ₹269 ಕೋಟಿ ಮೀಸಲಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು ಮಾತ್ರವಲ್ಲದೇ ಇತರೆಡೆ ಹೆಚ್ಚಿರುವ ಬೀದಿ ನಾಯಿಗಳ ಸಮಸ್ಯೆ ನಿವಾರಿಸಲು ರಾಜ್ಯದಲ್ಲಿ ಎರಡು ಕಡೆ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼಗಳು ಸ್ಥಾಪನೆಯಾಗಲಿವೆ.</p>.<p>ಇದರಡಿ ಬೆಂಗಳೂರು ಹಾಗೂ ಬೀದರ್ ಪಶು ಮಹವಿದ್ಯಾಲಯದ ಪಶುವೈದ್ಯರು ಮತ್ತು ಪಶುವೈದ್ಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲಾಗುತ್ತದೆ. ಇದರಿಂದ ರಾಜ್ಯದಲ್ಲಿ ವೈಜ್ಞಾನಿಕ ಹಾಗೂ ಪರಿಣಾಮಕಾರಿ ಸಂತಾನಹರಣ ನಿಯಂತ್ರಣ ಜಾರಿಗೆ ಸಹಕಾರಿಯಾಗಲಿದೆ. </p>.<p>ಇದಲ್ಲದೇ ಪಶುಗಳ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಬೆಂಗಳೂರು ಹಾಗೂ ಬೀದರ್ ಪಶುವೈದ್ಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರು ಸಿ.ಟಿ.ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.</p>.<p><strong>ವನ್ಯಜೀವಿ ಸಂಘರ್ಷ ತಡೆಗೆ ₹ 1,500 ಕೋಟಿ:</strong> ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳ ಗ್ರಾಮಾಂತರ ಪ್ರದೇಶದಲ್ಲಿ ಮಾನವ–ವನ್ಯಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶದಿಂದ ʻಕರ್ನಾಟಕ ಮಾನವ–ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆ ಪ್ರಕಟಿಸಲಾಗಿದೆ.</p>.<p>ಮುಂದಿನ ಐದು ವರ್ಷದಲ್ಲಿ ₹ 1,500 ಕೋಟಿ ವೆಚ್ಚದಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ₹269 ಕೋಟಿ ಮೀಸಲಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>