<p><strong>ಬೆಂಗಳೂರು</strong>: ಪ್ರಸಕ್ತ ಸಾಲಿನಲ್ಲಿ ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆ 8 ಸಾವಿರ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ನೇಮಕಾತಿಯನ್ನು ಕ್ರಮಬದ್ಧ, ಪಾರದರ್ಶಕ ಮತ್ತು ನಿಯಮಿತವಾಗಿ ನಡೆಸಲು ಶಾಶ್ವತ ಪೊಲೀಸ್ ಮತ್ತು ಪೊಲೀಸ್ ಸಹಾಯಕ ಸೇವೆಗಳ ನೇಮಕಾತಿ ಮಂಡಳಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.</p>.<p>ಪ್ರಸಕ್ತ ಸಾಲಿನಲ್ಲಿ ₹ 250 ಕೋಟಿ ವೆಚ್ಚದಲ್ಲಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಗೊಳ್ಳಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದ ಸಮಯದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಗೆ ವಸತಿ ಸೌಲಭ್ಯ ಒದಗಿಸಲು ₹20 ಕೋಟಿ ವೆಚ್ಚದಲ್ಲಿ 1 ಸಾವಿರ ಸಿಬ್ಬಂದಿಗೆ ಶಾಶ್ವತ ಬ್ಯಾರಕ್ ನಿರ್ಮಿಸಲು ಉದ್ದೇಶಿಸಲಾಗಿದೆ.</p>.<p>ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ 12 ನೂತನ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ ನಿವೇಶನ ಲಭ್ಯವಿರುವ 10 ಪೊಲೀಸ್ ಠಾಣೆ ಕಟ್ಟಡಗಳನ್ನು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.</p>.<p>ಬೆಂಗಳೂರಿನಲ್ಲಿ ಗರಿಷ್ಠ ಭದ್ರತಾ ಕೇಂದ್ರ ಕಾರಾಗೃಹ ಹಾಗೂ ವಿಜಯಪುರ ಮತ್ತು ಬೀದರ್ಗಳಲ್ಲಿ ತಲಾ ಒಂದು ಸಾವಿರ ಬಂದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹಗಳನ್ನು ₹471 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. </p>.<p>ಮಂಗಳೂರು ಕೇಂದ್ರ ಕಾರಾಗೃಹದ ಎರಡನೇ ಹಂತದ ಕಾಮಗಾರಿಯನ್ನು ಮತ್ತು ರಾಯಚೂರು ಜಿಲ್ಲಾ ಕೇಂದ್ರ ಕಾರಾಗೃಹಗಳ ನಿರ್ಮಾಣ ಕಾರ್ಯವನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಸಕ್ತ ಸಾಲಿನಲ್ಲಿ ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆ 8 ಸಾವಿರ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ನೇಮಕಾತಿಯನ್ನು ಕ್ರಮಬದ್ಧ, ಪಾರದರ್ಶಕ ಮತ್ತು ನಿಯಮಿತವಾಗಿ ನಡೆಸಲು ಶಾಶ್ವತ ಪೊಲೀಸ್ ಮತ್ತು ಪೊಲೀಸ್ ಸಹಾಯಕ ಸೇವೆಗಳ ನೇಮಕಾತಿ ಮಂಡಳಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.</p>.<p>ಪ್ರಸಕ್ತ ಸಾಲಿನಲ್ಲಿ ₹ 250 ಕೋಟಿ ವೆಚ್ಚದಲ್ಲಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಗೊಳ್ಳಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದ ಸಮಯದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಗೆ ವಸತಿ ಸೌಲಭ್ಯ ಒದಗಿಸಲು ₹20 ಕೋಟಿ ವೆಚ್ಚದಲ್ಲಿ 1 ಸಾವಿರ ಸಿಬ್ಬಂದಿಗೆ ಶಾಶ್ವತ ಬ್ಯಾರಕ್ ನಿರ್ಮಿಸಲು ಉದ್ದೇಶಿಸಲಾಗಿದೆ.</p>.<p>ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ 12 ನೂತನ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ ನಿವೇಶನ ಲಭ್ಯವಿರುವ 10 ಪೊಲೀಸ್ ಠಾಣೆ ಕಟ್ಟಡಗಳನ್ನು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.</p>.<p>ಬೆಂಗಳೂರಿನಲ್ಲಿ ಗರಿಷ್ಠ ಭದ್ರತಾ ಕೇಂದ್ರ ಕಾರಾಗೃಹ ಹಾಗೂ ವಿಜಯಪುರ ಮತ್ತು ಬೀದರ್ಗಳಲ್ಲಿ ತಲಾ ಒಂದು ಸಾವಿರ ಬಂದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹಗಳನ್ನು ₹471 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. </p>.<p>ಮಂಗಳೂರು ಕೇಂದ್ರ ಕಾರಾಗೃಹದ ಎರಡನೇ ಹಂತದ ಕಾಮಗಾರಿಯನ್ನು ಮತ್ತು ರಾಯಚೂರು ಜಿಲ್ಲಾ ಕೇಂದ್ರ ಕಾರಾಗೃಹಗಳ ನಿರ್ಮಾಣ ಕಾರ್ಯವನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>