ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೃಷ್ಣ ಬೈರೇಗೌಡ, ‘ಈ ಜಾಗವು ಸರ್ಕಾರಿ ಜಾಗ ಎಂದು ಪಹಣಿಯಲ್ಲಿದೆ. ಆದರೆ, ಸಬ್ ರಿಜಿಸ್ಟ್ರಾರ್ ಈ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ನೋಂದಣಿ ಮಾಡಿಕೊಟ್ಟಿದ್ದಾರೆ. ಎರಡು ತಿಂಗಳ ಹಿಂದೆಯೇ ಪ್ರಕರಣ ಬೆಳಕಿಗೆ ಬಂದಿತ್ತು. ಆದರೆ, ತಾಲ್ಲೂಕು ಆಡಳಿತ ಕ್ರಮ ಕೈಗೊಂಡಿರಲಿಲ್ಲ. ಸದನದಲ್ಲಿ ವಿಷಯ ಪ್ರಸ್ತಾಪವಾಗುತ್ತದೆ ಎಂದು ಗೊತ್ತಾಗಿ ಯಲಹಂಕ ತಹಶೀಲ್ದಾರ್ ಒತ್ತುವರಿ ತೆರವು ಮಾಡಿ ಅಣಕ ಮಾಡಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದ್ದಾರೆ’ ಎಂದರು.