<p><strong>ರಾಜರಾಜೇಶ್ವರಿನಗರ:</strong> ‘ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ನ ಕೆಲವರನ್ನು ನೆಪಮಾತ್ರಕ್ಕೆ ಸಚಿವರಾಗಿ ಮಾಡಿದ್ದರು. ಕೆಲಸ ಮಾಡಲು ಬಿಡದ ಕಾರಣ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಉಲ್ಲಾಳು ವಾರ್ಡ್ನ ನಾಗದೇವನಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಸೋಮಶೇಖರ್ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅವರು, ಬಿಜೆಪಿಗೆ ಬಂದ ಮೇಲೆ ನಮ್ಮ ಕುಟುಂಬದ ಸದಸ್ಯರಂತೆ’ ಎಂದರು. ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್, ಮೈತ್ರಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಮನವಿ ಮಾಡಿದರೂ ಕವಡೆ ಕಾಸಿನ ಬೆಲೆ ಸಿಗುತ್ತಿರಲಿಲ್ಲ’ ಎಂದರು.</p>.<p>ಬಿಜೆಪಿ ಮುಖಂಡ ಅಶ್ವತ್ಥ್ ನಾರಾಯಣ, ಪಾಲಿಕೆ ಸದಸ್ಯರಾದ ಶಾರದಾ ಮುನಿರಾಜು, ಆರ್ಯಶ್ರೀನಿವಾಸ್, ಸತ್ಯನಾರಾಯಣ, ರಾಜಣ್ಣ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಿ.ಎಂ.ಮಾರೇಗೌಡ, ಮುಖಂಡರಾದ ಎ.ಶಿವಕುಮಾರ್, ಪಂಚಲಿಂಗಯ್ಯ, ಪುರಸಭೆ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು, ಮೈಲಸಂದ್ರ ಮುನಿರಾಜು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ನ ಕೆಲವರನ್ನು ನೆಪಮಾತ್ರಕ್ಕೆ ಸಚಿವರಾಗಿ ಮಾಡಿದ್ದರು. ಕೆಲಸ ಮಾಡಲು ಬಿಡದ ಕಾರಣ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಉಲ್ಲಾಳು ವಾರ್ಡ್ನ ನಾಗದೇವನಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಸೋಮಶೇಖರ್ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅವರು, ಬಿಜೆಪಿಗೆ ಬಂದ ಮೇಲೆ ನಮ್ಮ ಕುಟುಂಬದ ಸದಸ್ಯರಂತೆ’ ಎಂದರು. ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್, ಮೈತ್ರಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಮನವಿ ಮಾಡಿದರೂ ಕವಡೆ ಕಾಸಿನ ಬೆಲೆ ಸಿಗುತ್ತಿರಲಿಲ್ಲ’ ಎಂದರು.</p>.<p>ಬಿಜೆಪಿ ಮುಖಂಡ ಅಶ್ವತ್ಥ್ ನಾರಾಯಣ, ಪಾಲಿಕೆ ಸದಸ್ಯರಾದ ಶಾರದಾ ಮುನಿರಾಜು, ಆರ್ಯಶ್ರೀನಿವಾಸ್, ಸತ್ಯನಾರಾಯಣ, ರಾಜಣ್ಣ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಿ.ಎಂ.ಮಾರೇಗೌಡ, ಮುಖಂಡರಾದ ಎ.ಶಿವಕುಮಾರ್, ಪಂಚಲಿಂಗಯ್ಯ, ಪುರಸಭೆ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು, ಮೈಲಸಂದ್ರ ಮುನಿರಾಜು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>