ಬೆಂಗಳೂರು: ‘ಆರ್.ಆರ್. ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಸೋಲುವ ಭಯದಿಂದ ಬಿಜೆಪಿಯವರು ಗಲಾಟೆ, ದೊಂಬಿ ಮಾಡಿಸುತ್ತಿದ್ದಾರೆ. ಮಧ್ಯಾಹ್ನದವರೆಗೆ ಶಾಂತಿಯುತವಾಗಿ ಮತದಾನ ನಡೆದಿದೆ. ಆದರೆ, ನಂತರ ಮತದಾರರು ಮತದಾನಕ್ಕೆ ಬರದಂತೆ ತಡೆಯೊಡ್ಡುತ್ತಿದ್ದಾರೆ. ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೂ ತಂದಿದ್ದೇವೆ. ಹೆಚ್ಚಿನ ಪೊಲೀಸರ ಭದ್ರತೆ ನೀಡುವಂತೆ ಮನವಿ ಮಾಡಿದ್ದೇವೆ’ ಎಂದು ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ನಾರಾಯಣಸ್ವಾಮಿ ಹೇಳಿದರು.