<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನ ಪಡಿಸಿಕೊಂಡಿದ್ದ ಜಮೀನುಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1) ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳ ಅಧಿಸೂಚನೆಯನ್ನು ಹಿಂಪಡೆಯಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಅಲ್ಲದೇ, ಈ ಪ್ರಕರಣಗಳಲ್ಲಿ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟಿಸ್ ನೀಡಿ, ವಿವರಣೆ ಪಡೆದು ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>2009–2010 ರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ಉತ್ತರ ತಾಲ್ಲೂಕುಗಳ ವಿವಿಧ ಹೋಬಳಿಗಳಲ್ಲಿ ಭೂಸ್ವಾಧೀನ ಕೈಬಿಟ್ಟು ಅಧಿಸೂಚನೆ ಹೊರಡಿಸಲಾಗಿತ್ತು.</p>.<p><strong>ಕಾಂಗ್ರೆಸ್ ಕಚೇರಿಗೆ ಜಮೀನು:</strong></p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸರ್ವೆ ನಂಬರ್ 66 ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಗುತ್ತಿಗೆ ನೀಡಲು ಸಂಪುಟ ತೀರ್ಮಾನಿಸಿದೆ.</p><p><strong>ಕೋಲಾರ, ಚಿಂತಾಮಣಿ: 126 ಕೆರೆಗಳಿಗೆ ನೀರು</strong></p><p>ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕರೆಗಳಿಗೆ ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸುವ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p><p>ಈ ಯೋಜನೆಯ ಅಂದಾಜು ವೆಚ್ಚ ₹128 ಕೋಟಿ. 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆಯ ಏತ ನೀರಾವರಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನ ಪಡಿಸಿಕೊಂಡಿದ್ದ ಜಮೀನುಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1) ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳ ಅಧಿಸೂಚನೆಯನ್ನು ಹಿಂಪಡೆಯಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಅಲ್ಲದೇ, ಈ ಪ್ರಕರಣಗಳಲ್ಲಿ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟಿಸ್ ನೀಡಿ, ವಿವರಣೆ ಪಡೆದು ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>2009–2010 ರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ಉತ್ತರ ತಾಲ್ಲೂಕುಗಳ ವಿವಿಧ ಹೋಬಳಿಗಳಲ್ಲಿ ಭೂಸ್ವಾಧೀನ ಕೈಬಿಟ್ಟು ಅಧಿಸೂಚನೆ ಹೊರಡಿಸಲಾಗಿತ್ತು.</p>.<p><strong>ಕಾಂಗ್ರೆಸ್ ಕಚೇರಿಗೆ ಜಮೀನು:</strong></p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸರ್ವೆ ನಂಬರ್ 66 ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಗುತ್ತಿಗೆ ನೀಡಲು ಸಂಪುಟ ತೀರ್ಮಾನಿಸಿದೆ.</p><p><strong>ಕೋಲಾರ, ಚಿಂತಾಮಣಿ: 126 ಕೆರೆಗಳಿಗೆ ನೀರು</strong></p><p>ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕರೆಗಳಿಗೆ ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸುವ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p><p>ಈ ಯೋಜನೆಯ ಅಂದಾಜು ವೆಚ್ಚ ₹128 ಕೋಟಿ. 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆಯ ಏತ ನೀರಾವರಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>