<p><strong>ಬೆಂಗಳೂರು:</strong> ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ಇದುವರೆಗೂ ಕಾಯ್ದೆ ರದ್ದುಪಡಿಸಿಲ್ಲ. ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತರ ಮೇಲೆ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ಕ್ರೈಸ್ತ ಸಂಘಟನೆ ಆರೋಪಿಸಿದೆ.</p><p>ಸಂಘಟನೆಯ ಅಧ್ಯಕ್ಷ ಸ್ಟ್ಯಾನ್ಲಿ ಪಿಂಟೊ, ವಕೀಲೆ ಸಲೋಮಿ ಶಿರಿನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಾವೇರಿಯಲ್ಲಿ ಜಮೀನಿನ ವಿವಾದವನ್ನು ತಿರುಚಿ ಮತಾಂತರ ದೂರು ನೀಡಲಾಗಿದೆ. ಸ್ಥಳದಲ್ಲೇ ಇಲ್ಲದ ವೃದ್ಧರು, ಮಹಿಳೆಯರನ್ನೆಲ್ಲ ಸೇರಿಸಿ 20 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ತಿಳಿಸಿದರು.</p><p>ಮನೆಗಳಲ್ಲಿ, ಚರ್ಚ್ಗಳಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕೆಲವು ಸಂಘಟನೆಗಳು ದಾಳಿ ಮಾಡಿ ಗಲಾಟೆ ನಡೆಸಿದ್ದಾರೆ. ಇದೆಲ್ಲ ಕಾಯ್ದೆಯ ದುರುಪಯೋಗವಾಗಿದೆ. ಹಾಗಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕು. ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p><p>ಕಾಯ್ದೆ ಹಿಂಪಡೆಯದೇ ಇದ್ದರೆ ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ರಾಜ್ಯಮಟ್ಟದಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ಇದುವರೆಗೂ ಕಾಯ್ದೆ ರದ್ದುಪಡಿಸಿಲ್ಲ. ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತರ ಮೇಲೆ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ಕ್ರೈಸ್ತ ಸಂಘಟನೆ ಆರೋಪಿಸಿದೆ.</p><p>ಸಂಘಟನೆಯ ಅಧ್ಯಕ್ಷ ಸ್ಟ್ಯಾನ್ಲಿ ಪಿಂಟೊ, ವಕೀಲೆ ಸಲೋಮಿ ಶಿರಿನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಾವೇರಿಯಲ್ಲಿ ಜಮೀನಿನ ವಿವಾದವನ್ನು ತಿರುಚಿ ಮತಾಂತರ ದೂರು ನೀಡಲಾಗಿದೆ. ಸ್ಥಳದಲ್ಲೇ ಇಲ್ಲದ ವೃದ್ಧರು, ಮಹಿಳೆಯರನ್ನೆಲ್ಲ ಸೇರಿಸಿ 20 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ತಿಳಿಸಿದರು.</p><p>ಮನೆಗಳಲ್ಲಿ, ಚರ್ಚ್ಗಳಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕೆಲವು ಸಂಘಟನೆಗಳು ದಾಳಿ ಮಾಡಿ ಗಲಾಟೆ ನಡೆಸಿದ್ದಾರೆ. ಇದೆಲ್ಲ ಕಾಯ್ದೆಯ ದುರುಪಯೋಗವಾಗಿದೆ. ಹಾಗಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕು. ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p><p>ಕಾಯ್ದೆ ಹಿಂಪಡೆಯದೇ ಇದ್ದರೆ ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ರಾಜ್ಯಮಟ್ಟದಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>