ವಿಶೇಷ ವಿಮಾನದಲ್ಲಿ ಮಂಗಳ ವಾರ ಬೆಳಿಗ್ಗೆ ಜೈಪುರಕ್ಕೆ ತೆರಳಲಿರುವ ಶಿವಕುಮಾರ್, ರಾಜಸ್ಥಾನದ ಮುಖ್ಯ ಮಂತ್ರಿ ಅಶೋಕ್ ಗೆಹಲೋತ್ ಅವರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್ ಆಡಳಿತದ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಮತ್ತು ಪಕ್ಷದ ಯುವ ನಾಯಕ ಸಚಿನ್ ಪೈಲಟ್ ನಡುವೆ ಅಂತರ ಹೆಚ್ಚಿ, ಪಕ್ಷ ಇಬ್ಭಾಗವಾಗುವ ಹಂತ ತಲುಪಿದಾಗ ರಾಷ್ಟ್ರೀಯ ನಾಯಕರ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಬಗೆ ಹರಿದಿತ್ತು. ಇದೀಗ ಮತ್ತೆ ಸಮಸ್ಯೆ ಉಲ್ಬಣಗೊಂಡಿದೆ ಎನ್ನಲಾಗಿದೆ. ಈ ಮಧ್ಯೆ, ಅಲ್ಲಿ ಸಂಪುಟ ಪುನರ್ ರಚನೆಯ ಕಸರತ್ತು ನಡೆಯತ್ತಿದೆ. ಈ ಬೆಳವಣಿಗೆಗಳ ನಡುವೆ ಅಲ್ಲಿನ ಗೆಹಲೋತ್ ಅವರನ್ನು ಶಿವಕುಮಾರ್ ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.