ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ. ‘ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ನ ಉಪತಳಿ ಜೆಎನ್.1 ಪ್ರಕರಣ ನಗರದಲ್ಲಿ ವರದಿಯಾಗಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಈಗಾಗಲೇ ಮಾರ್ಗಸೂಚಿಗಳು, ಸುತ್ತೋಲೆಗಳು ಹಾಗೂ ಸಲಹಾ ಪತ್ರಗಳನ್ನು ಹೊರಡಿಸಲಾಗಿದೆ. ಅವುಗಳ ಪಾಲನೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಲಭ್ಯವಿರುವ ಮಾಹಿತಿಯ ಪ್ರಕಾರ ಜೆಎನ್.1 ಉಪತಳಿಯು ಹೆಚ್ಚು ಹರಡುವಿಕೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದಾಗಿ ವೃದ್ಧರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.