<p><strong>ಬೆಂಗಳೂರು: </strong>ರಾಜ್ಯದಲ್ಲಿ ಗುರುವಾರ 363 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,743ಕ್ಕೆ ಏರಿಕೆಯಾಗಿದೆ.</p>.<p>ಒಂದು ದಿನದ ಅವಧಿಯಲ್ಲಿ 1.06 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.34 ರಷ್ಟು ದೃಢಪಟ್ಟಿದೆ. ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 17 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬೀದರ್, ಚಿಕ್ಕಬಳ್ಳಾಪುರ ಸೇರಿದಂತೆ 7 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.</p>.<p>ಬೆಂಗಳೂರು ನಗರ (206), ಉತ್ತರ ಕನ್ನಡ (22) ಹಾಗೂ ದಕ್ಷಿಣ ಕನ್ನಡದಲ್ಲಿ (20) ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 20ಕ್ಕಿಂತ ಕಡಿಮೆಯಿದೆ.ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.96 ಲಕ್ಷ ದಾಟಿದೆ.</p>.<p>ಬೆಂಗಳೂರಿನಲ್ಲಿ 5,024 ಸಕ್ರಿಯ ಪ್ರಕರಣಗಳಿವೆ.ಯಾದಗಿರಿ, ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.ಸೋಂಕಿತರಲ್ಲಿ 191 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.51 ಲಕ್ಷ ದಾಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಗುರುವಾರ 363 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,743ಕ್ಕೆ ಏರಿಕೆಯಾಗಿದೆ.</p>.<p>ಒಂದು ದಿನದ ಅವಧಿಯಲ್ಲಿ 1.06 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.34 ರಷ್ಟು ದೃಢಪಟ್ಟಿದೆ. ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 17 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬೀದರ್, ಚಿಕ್ಕಬಳ್ಳಾಪುರ ಸೇರಿದಂತೆ 7 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.</p>.<p>ಬೆಂಗಳೂರು ನಗರ (206), ಉತ್ತರ ಕನ್ನಡ (22) ಹಾಗೂ ದಕ್ಷಿಣ ಕನ್ನಡದಲ್ಲಿ (20) ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 20ಕ್ಕಿಂತ ಕಡಿಮೆಯಿದೆ.ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.96 ಲಕ್ಷ ದಾಟಿದೆ.</p>.<p>ಬೆಂಗಳೂರಿನಲ್ಲಿ 5,024 ಸಕ್ರಿಯ ಪ್ರಕರಣಗಳಿವೆ.ಯಾದಗಿರಿ, ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.ಸೋಂಕಿತರಲ್ಲಿ 191 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.51 ಲಕ್ಷ ದಾಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>