ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ‘ಸಿಎಸ್ಆರ್ ನಿಧಿಯಡಿ ಸಮಾಜಕ್ಕೆ ಉಪಯೋಗವಾಗುವ ಕಾರ್ಯ ಕೈಗೊಳ್ಳುವ ಕಂಪನಿಗಳಿಗೆ ಸರ್ಕಾರ ಎಲ್ಲ ನೆರವನ್ನೂ ನೀಡುತ್ತದೆ. ಯಾದಗಿರಿ, ಕಲಬುರ್ಗಿ, ರಾಯಚೂರಿನಂತಹ ಹಿಂದುಳಿದ ಜಿಲ್ಲೆಗಳಲ್ಲಿ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲು ಈ ಸಮಾವೇಶ ಮೊದಲ ಹೆಜ್ಜೆಯಾಗಲಿ. ಸರ್ಕಾರ, ಸರ್ಕಾರೇತರ ಸಂಸ್ಥೆಗಳು (ಎನ್ಜಿಒ) ಹಾಗೂ ಕಾರ್ಪೊರೇಟ್ ಕಂಪನಿಗಳು ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದರು.