<p><strong>ಬೆಂಗಳೂರು:</strong> ಸತೀಶ ಜಾರಕಿಹೊಳಿ ಅವರು ಹಿಂದೂ ಪದದ ಕುರಿತು ಹೇಳಿಕೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಾಜ್ಯ ಸಮಿತಿ ಸಂಘಟನೆಗಳ ಸಮನ್ವಯ ಸಮಿತಿ) ಸ್ವಾಗತಿಸಿದೆ. ಅವರ ಹೇಳಿಕೆಯನ್ನು ಬೆಂಬಲಿಸಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದೆ.</p>.<p>‘ಸತೀಶ ಜಾರಕಿಹೊಳಿ ಅವರು ಯಾವುದೇ ಜಾತಿ ಮತ್ತು ಧರ್ಮವನ್ನು ನಿಂಧಿಸಿಲ್ಲ. ಅವರು ನೀಡಿರುವ ಹೇಳಿಕೆಯನ್ನು ಗಮನಿಸಬೇಕು’ ಎಂದು ದಸಂಸ ರಾಜ್ಯ ಸಂಚಾಲಕ ಬಸವರಾಜ್ ಕೌತಾಲ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಸಮರ್ಥಿಸಿಕೊಂಡರು.</p>.<p>‘ಹಿಂದುತ್ವದ ಹೆಸರಿನಲ್ಲಿ ಸಾವಿರಾರೂ ವರ್ಷಗಳಿಂದ ದಲಿತರನ್ನು, ಆದಿವಾಸಿಗಳನ್ನು ಮತ್ತು ಮಹಿಳೆಯರನ್ನು ವಂಚಿಸುತ್ತಲೇ ಬಂದಿದ್ದಾರೆ. ಹಿಂದೂ ಎಂದರೆ ನಾವೆಲ್ಲ ಒಂದು ಎಂದು ಹೇಳಿ ದೊಡ್ಡ ಸಮುದಾಯಗಳನ್ನು ಜಾತಿಯ ಹೆಸರಿನಲ್ಲಿ ಹಲ್ಲೆ, ಕೊಲೆ, ಅತ್ಯಾಚಾರ ಮತ್ತು ಸಾಮಾಜಿಕ ಬಹಿಷ್ಕಾರ ಹಾಕುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆರ್ಪಿಐ ರಾಜ್ಯಾಧ್ಯಕ್ಷ ಆರ್. ಮೋಹನ್ರಾಜ್ ಮಾತನಾಡಿ, ‘ಬಿಜೆಪಿ ತನ್ನ ಇಚ್ಛಾಶಕ್ತಿಯನ್ನು ಪೂರೈಸಿಕೊಳ್ಳಲು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಖಂಡನೀಯ. ಸತೀಶ ಜಾರಕಿಹೊಳಿ ಅವರ ಪರವಾಗಿ ಕಾಂಗ್ರೆಸ್ ಪಕ್ಷ ಇರಬೇಕಾಗಿತ್ತು. ರಾಜಕೀಯ ದುರದ್ದೇಶದಿಂದ ಆ ಪಕ್ಷವೂ ಹೇಳಿಕೆಯನ್ನು ಖಂಡಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸತೀಶ ಜಾರಕಿಹೊಳಿ ಅವರು ಹಿಂದೂ ಪದದ ಕುರಿತು ಹೇಳಿಕೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಾಜ್ಯ ಸಮಿತಿ ಸಂಘಟನೆಗಳ ಸಮನ್ವಯ ಸಮಿತಿ) ಸ್ವಾಗತಿಸಿದೆ. ಅವರ ಹೇಳಿಕೆಯನ್ನು ಬೆಂಬಲಿಸಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದೆ.</p>.<p>‘ಸತೀಶ ಜಾರಕಿಹೊಳಿ ಅವರು ಯಾವುದೇ ಜಾತಿ ಮತ್ತು ಧರ್ಮವನ್ನು ನಿಂಧಿಸಿಲ್ಲ. ಅವರು ನೀಡಿರುವ ಹೇಳಿಕೆಯನ್ನು ಗಮನಿಸಬೇಕು’ ಎಂದು ದಸಂಸ ರಾಜ್ಯ ಸಂಚಾಲಕ ಬಸವರಾಜ್ ಕೌತಾಲ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಸಮರ್ಥಿಸಿಕೊಂಡರು.</p>.<p>‘ಹಿಂದುತ್ವದ ಹೆಸರಿನಲ್ಲಿ ಸಾವಿರಾರೂ ವರ್ಷಗಳಿಂದ ದಲಿತರನ್ನು, ಆದಿವಾಸಿಗಳನ್ನು ಮತ್ತು ಮಹಿಳೆಯರನ್ನು ವಂಚಿಸುತ್ತಲೇ ಬಂದಿದ್ದಾರೆ. ಹಿಂದೂ ಎಂದರೆ ನಾವೆಲ್ಲ ಒಂದು ಎಂದು ಹೇಳಿ ದೊಡ್ಡ ಸಮುದಾಯಗಳನ್ನು ಜಾತಿಯ ಹೆಸರಿನಲ್ಲಿ ಹಲ್ಲೆ, ಕೊಲೆ, ಅತ್ಯಾಚಾರ ಮತ್ತು ಸಾಮಾಜಿಕ ಬಹಿಷ್ಕಾರ ಹಾಕುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆರ್ಪಿಐ ರಾಜ್ಯಾಧ್ಯಕ್ಷ ಆರ್. ಮೋಹನ್ರಾಜ್ ಮಾತನಾಡಿ, ‘ಬಿಜೆಪಿ ತನ್ನ ಇಚ್ಛಾಶಕ್ತಿಯನ್ನು ಪೂರೈಸಿಕೊಳ್ಳಲು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಖಂಡನೀಯ. ಸತೀಶ ಜಾರಕಿಹೊಳಿ ಅವರ ಪರವಾಗಿ ಕಾಂಗ್ರೆಸ್ ಪಕ್ಷ ಇರಬೇಕಾಗಿತ್ತು. ರಾಜಕೀಯ ದುರದ್ದೇಶದಿಂದ ಆ ಪಕ್ಷವೂ ಹೇಳಿಕೆಯನ್ನು ಖಂಡಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>