ಕರುನಾಡ ವಿಜಯಸೇನೆ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಪ್ರಭು ಕೆಂಪೇಗೌಡರು ವಿಶ್ವವೇ ಗುರುತಿಸುವಂತೆ ಬೆಂಗಳೂರು ನಗರವನ್ನು ಕಟ್ಟಿ ಬೆಳೆಸಿದ್ದಾರೆ. ಇಂದು ಇಲ್ಲಿ ಕೋಟ್ಯಾಂತರ ಜನ ಅನ್ನ, ಉದ್ಯೋಗ ಮತ್ತು ಆಶ್ರಯ ಪಡೆದುಕೊಂಡಿದ್ದಾರೆ. ಜಾತಿ, ಭೇದವಿಲ್ಲದೆ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಸ್ಮರಿಸಿದರು.