ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಜಿನಗರ ಕ್ಷೇತ್ರ: ಕಾಂಗ್ರೆಸ್‌ ಟಿಕೆಟ್‌ಗೆ ಅಬ್ದುಲ್‌ ಅಜೀಜ್‌ ಒತ್ತಾಯ

Last Updated 19 ಸೆಪ್ಟೆಂಬರ್ 2019, 20:27 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ಪಕ್ಷವನ್ನು 1976ರಲ್ಲಿ ಸೇರಿದ ನಾನು, ಇಂದಿನವರೆಗೆ ಪಕ್ಷಕ್ಕಾಗಿ ದುಡಿದಿದ್ದೇನೆ. ಮುಂದಿನ ಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್‌ ನನಗೆ ನೀಡಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಅಜೀಜ್‌ ಮನವಿ ಮಾಡಿದರು.

‘ನಮ್ಮದು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ. ನನ್ನ ರಕ್ತದಲ್ಲಿಯೇ ಕಾಂಗ್ರೆಸ್‌ ಇದೆ. ನಾಲ್ಕು ದಶಕಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಆದರೆ, ಕ್ಷೇತ್ರದ ಪರಿಚಯವೇ ಇಲ್ಲದವರಿಗೆ ಈವರೆಗೆ ಟಿಕೆಟ್‌ ನೀಡಲಾಗಿದೆ’ ಎಂದು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಆರ್. ಗುಂಡೂರಾವ್, ವೀರೇಂದ್ರ ಪಾಟೀಲರು ಮುಖ್ಯಮಂತ್ರಿಯಾಗಿದ್ದಾಗ ಕ್ಷೇತ್ರದಿಂದ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಟಿಕೆಟ್‌ ತಪ್ಪಿಸಿ, ಕ್ಷೇತ್ರದ ಪರಿಚಯವೇ ಇರದ ರೋಷನ್‌ ಬೇಗ್‌ ಅವರಿಗೆ ನೀಡಲಾಯಿತು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT