ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲನಚಿತ್ರ ವಾಣಿಜ್ಯ ಮಂಡಳಿಗೆ ಕೂಡಲೇ ಚುನಾವಣೆ ನಡೆಸಲು ಸದಸ್ಯರ ಆಗ್ರಹ

ಜಿಲ್ಲಾ ನೋಂದಣಾಧಿಕಾರಿಗೆ ಸದಸ್ಯರ ಮನವಿ
Last Updated 30 ನವೆಂಬರ್ 2021, 16:22 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಡಿಸೆಂಬರ್‌ 31ರ ಒಳಗೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಮಂಡಳಿಯ ಸದಸ್ಯರು ಜಿಲ್ಲಾ ನೋಂದಣಾಧಿಕಾರಿಗೆ ಪತ್ರ ಬರೆದಿದ್ದಾರೆ.

‘ಮಂಡಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸುವಂತೆ ವಾಣಿಜ್ಯ ಮಂಡಳಿಗೆ ಜಿಲ್ಲಾ ನೋಂದಣಾಧಿಕಾರಿ ಆದೇಶಿಸಿದ್ದರೂ ಅದು ಪಾಲನೆ ಆಗಿಲ್ಲ. ಇದೀಗ ದುರುದ್ದೇಶಪೂರ್ವಕವಾಗಿ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಪ್ರಸ್ತುತ ಆಡಳಿತ ಮಂಡಳಿಯು ಇಲಾಖೆಯ ಆದೇಶವನ್ನು ನಿರ್ಲಕ್ಷಿಸಿ ಅನಧಿಕೃತವಾಗಿ ಆಡಳಿತ ನಡೆಸುತ್ತಿದೆ. ನ. 26ರಂದು ಕಾರ್ಯಕಾರಿ ಸಮಿತಿಯ ತುರ್ತು ಸಭೆ ನಡೆಸಿದ್ದರೂ ಚುನಾವಣೆ ಬಗ್ಗೆ ಸದಸ್ಯರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಆದ್ದರಿಂದ ಜಿಲ್ಲಾ ನೋಂದಣಾಧಿಕಾರಿ ಕೂಡಲೇ ಮಧ್ಯಪ್ರವೇಶಿಸಿ ಚುನಾವಣೆಗೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸದಸ್ಯರಾದ ವಿಜಯ್‌ಕುಮಾರ್‌ ಸಿಂಹ, ಬಾ.ಮ. ಗಿರೀಶ್‌, ಕೃಷ್ಣಪ್ಪ ಸೇರಿದಂತೆ 6 ಸದಸ್ಯರು ಮನವಿಗೆ ಸಹಿ ಮಾಡಿದ್ದಾರೆ.

ಚುನಾವಣೆ ಮುಂದೂಡುವುದಿಲ್ಲ: ಮಂಡಳಿ ಸ್ಪಷ್ಟನೆ

‘ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡುವ ಪ್ರಸ್ತಾವ ಇಲ್ಲ. ಕೋವಿಡ್‌ ಕಾರಣದಿಂದಾಗಿ ರಾಜ್ಯ ಸರ್ಕಾರವೇ ಚುನಾವಣಾ ಚಟುವಟಿಕೆಗಳನ್ನು ಮುಂದೂಡಿತ್ತು. ಈ ಮಧ್ಯೆ ಹಾಲಿ ಆಡಳಿತ ಮಂಡಳಿಯ ಮೇಲೆ ಹಳೆಯ ಪ್ರಕರಣವೊಂದರ ಸಂಬಂಧ ವಿಚಾರಣೆಯೂ ನಡೆಯಿತು. ಆ ಆರೋಪ ನಿರಾಧಾರ ಎಂದೂ ಸಾಬೀತಾಯಿತು. ಈಗ ಮಂಡಳಿಯ ಲೆಕ್ಕಪತ್ರ, ದಾಖಲೆಗಳನ್ನು ಸಿದ್ಧಪಡಿಸುವ, ಮತದಾರರ ಪಟ್ಟಿ ಸಿದ್ಧಪಡಿಸುವ ಕೆಲಸ ಸಾಗಿದೆ. ಶೀಘ್ರವೇ ಚುನಾವಣೆ ನಡೆಸಲು ನಾವೂ ಬದ್ಧರಿದ್ದೇವೆ. ಎಲ್ಲ ಪ್ರಕ್ರಿಯೆಗಳು ನಡೆದಿವೆ’ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌. ಜೈರಾಜ್‌ ಮತ್ತು ಕಾರ್ಯದರ್ಶಿ ಎನ್‌.ಎಂ. ಸುರೇಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT