‘ಮಂಡಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸುವಂತೆ ವಾಣಿಜ್ಯ ಮಂಡಳಿಗೆ ಜಿಲ್ಲಾ ನೋಂದಣಾಧಿಕಾರಿ ಆದೇಶಿಸಿದ್ದರೂ ಅದು ಪಾಲನೆ ಆಗಿಲ್ಲ. ಇದೀಗ ದುರುದ್ದೇಶಪೂರ್ವಕವಾಗಿ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಪ್ರಸ್ತುತ ಆಡಳಿತ ಮಂಡಳಿಯು ಇಲಾಖೆಯ ಆದೇಶವನ್ನು ನಿರ್ಲಕ್ಷಿಸಿ ಅನಧಿಕೃತವಾಗಿ ಆಡಳಿತ ನಡೆಸುತ್ತಿದೆ. ನ. 26ರಂದು ಕಾರ್ಯಕಾರಿ ಸಮಿತಿಯ ತುರ್ತು ಸಭೆ ನಡೆಸಿದ್ದರೂ ಚುನಾವಣೆ ಬಗ್ಗೆ ಸದಸ್ಯರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಆದ್ದರಿಂದ ಜಿಲ್ಲಾ ನೋಂದಣಾಧಿಕಾರಿ ಕೂಡಲೇ ಮಧ್ಯಪ್ರವೇಶಿಸಿ ಚುನಾವಣೆಗೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸದಸ್ಯರಾದ ವಿಜಯ್ಕುಮಾರ್ ಸಿಂಹ, ಬಾ.ಮ. ಗಿರೀಶ್, ಕೃಷ್ಣಪ್ಪ ಸೇರಿದಂತೆ 6 ಸದಸ್ಯರು ಮನವಿಗೆ ಸಹಿ ಮಾಡಿದ್ದಾರೆ.