ಕನ್ನಡ ಚಿತ್ರರಂಗದ ಸಾಧಕರಾದ ಡಾ.ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್, ವಿಷ್ಣುವರ್ಧನ್ ಮತ್ತು ಪುನೀತ್ ರಾಜ್ಕುಮಾರ್ ಅವರ ಹೆಸರುಗಳನ್ನು ನಗರದ ಪ್ರಮುಖ ರಸ್ತೆಗಳಿಗೆ ಇರಿಸಲಾಗಿದೆ. ಅದಕ್ಕೆ ಕೃತಜ್ಞತೆ ಸಲ್ಲಿಸಿರುವ ನಿಯೋಗವು, ಅಂಬರೀಶ್ ಅವರಿಗೆ 70 ವರ್ಷಗಳು ಆದ ಸಂದರ್ಭದಲ್ಲಿ ಅವರ ಹೆಸರನ್ನು ರಾಮ್ ನಾರಾಯಣ ಚಲರಾಮ್ ಕಾಲೇಜ್ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕು ಎಂದು ಮನವಿ ಮಾಡಿದೆ. ಈ ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಲಾಗಿದೆ ಎಂದು ಬಾ.ಮ. ಹರೀಶ್ ಹೇಳಿದ್ದಾರೆ.