ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಸಂಘ ತನ್ನ ಅಧಿಕಾರಿಗಳ ಒಂದು ದಿನದ ವೇತನವನ್ನುರಾಜ್ಯದ ನೆರೆ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.
ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಆಗಸ್ಟ್ ತಿಂಗಳ ಸಂಬಳದಲ್ಲಿ ಒಂದು ದಿನದ ವೇತನವನ್ನು ಕಡಿತಗೊಳಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುವಂತೆ ಮನವಿ ಮಾಡಿದೆ.
ಸಂತ್ರಸ್ತರಿಗೆ ಬೇಕಾದ ಆಹಾರ, ಬಟ್ಟೆ, ನೀರು ಸೇರಿ ಇತರ ಸಾಮಗ್ರಿಗಳನ್ನು ಆರು ಲಾರಿಗಳಲ್ಲಿ ಮಂಗಳವಾರ ಸಂಘದಿಂದ ಕಳುಹಿಸಲಾಯಿತು.