ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ರಸ್ತೆ ದುರಸ್ತಿಗೆ ₹280 ಕೋಟಿ ಬಿಡುಗಡೆ ಮಾಡಿದ ಡಿಕೆಶಿ

Published 18 ಫೆಬ್ರುವರಿ 2024, 16:14 IST
Last Updated 18 ಫೆಬ್ರುವರಿ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನಾ ಕೋಟಾದಲ್ಲಿ 28 ವಿಧಾನಸಭೆ ಕ್ಷೇತ್ರಗಳಿಗೆ ₹280 ಕೋಟಿ ಬಿಡುಗಡೆ ಮಾಡಿದ್ದಾರೆ.

ಪಕ್ಷಭೇದ ಮರೆತು ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ತಲಾ ₹10 ಕೋಟಿ ಬಿಡುಗಡೆ ಮಾಡಿದ್ದು, ಈ ಹಣದಲ್ಲಿ ರಸ್ತೆ ದುರಸ್ತಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ನಡೆಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ. 

ಅನುದಾನ ಬಿಡುಗಡೆ ಮಾಡಿ ಫೆ.13ರಂದು ಟಿಪ್ಪಣಿಯನ್ನು ಮುಖ್ಯ ಆಯುಕ್ತರಿಗೆ ಕಳುಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT