<p><strong>ಬೆಂಗಳೂರು:</strong> ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ನಟ ಪ್ರಕಾಶ್ ರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.</p>.<p>ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಮೈಕ್ ಬಳಸಿದ್ದಾರೆ. ಪಾದಚಾರಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಆರೋಪಿಸಿ 2019ರ ಮಾರ್ಚ್ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಬಿಬಿಎಂಪಿ ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಎಂ.ಜಿ. ರಸ್ತೆಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿತ್ಯಾಗರಾಜನಗರ ಗ್ರಾಮ ಸೇವಾ ಸಂಘದಿಂದ ಬಿಬಿಎಂಪಿಗೆ ಮನವಿ ಸಲ್ಲಿಸಲಾಗಿತ್ತು.ಪ್ರತಿಭಟನೆಯ ಸಮಯದಲ್ಲಿ ನಾನು ನಾಮಪತ್ರ ಸಲ್ಲಿಸಿರಲಿಲ್ಲ. ರಾಜಕೀಯ ಕಾರ್ಯಕ್ರಮವಲ್ಲದ ಕಾರಣ ಅನುಮತಿ ಅಗತ್ಯವಿಲ್ಲ ಎಂದು ಬಿಬಿಎಂಪಿ ಹಿಂಬರಹ ನೀಡಿತ್ತು’ ಎಂದು ಪ್ರಕಾಶ್ ರಾಜ್ ಅರ್ಜಿಯಲ್ಲಿ ವಾದಿಸಿದ್ದರು.</p>.<p>‘ಅಫಿಡವಿಟ್ ಸಲ್ಲಿಸದಿರುವ ಕಾರಣದಿಂದ ಅರ್ಜಿದಾರರಿಗೆ ಯಾವುದೇ ಅನ್ಯಾಯವಾಗಿಲ್ಲ. ಸಿಆರ್ಪಿಸಿ ಸೆಕ್ಷನ್ 482 ಅಡಿಯಲ್ಲಿ ದೋಷಾರೋಪಪಟ್ಟಿ ನಿರಾಕರಣೆ ಮಾಡಲು ಆಗುವುದಿಲ್ಲ’ ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ನಟ ಪ್ರಕಾಶ್ ರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.</p>.<p>ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಮೈಕ್ ಬಳಸಿದ್ದಾರೆ. ಪಾದಚಾರಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಆರೋಪಿಸಿ 2019ರ ಮಾರ್ಚ್ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಬಿಬಿಎಂಪಿ ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಎಂ.ಜಿ. ರಸ್ತೆಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿತ್ಯಾಗರಾಜನಗರ ಗ್ರಾಮ ಸೇವಾ ಸಂಘದಿಂದ ಬಿಬಿಎಂಪಿಗೆ ಮನವಿ ಸಲ್ಲಿಸಲಾಗಿತ್ತು.ಪ್ರತಿಭಟನೆಯ ಸಮಯದಲ್ಲಿ ನಾನು ನಾಮಪತ್ರ ಸಲ್ಲಿಸಿರಲಿಲ್ಲ. ರಾಜಕೀಯ ಕಾರ್ಯಕ್ರಮವಲ್ಲದ ಕಾರಣ ಅನುಮತಿ ಅಗತ್ಯವಿಲ್ಲ ಎಂದು ಬಿಬಿಎಂಪಿ ಹಿಂಬರಹ ನೀಡಿತ್ತು’ ಎಂದು ಪ್ರಕಾಶ್ ರಾಜ್ ಅರ್ಜಿಯಲ್ಲಿ ವಾದಿಸಿದ್ದರು.</p>.<p>‘ಅಫಿಡವಿಟ್ ಸಲ್ಲಿಸದಿರುವ ಕಾರಣದಿಂದ ಅರ್ಜಿದಾರರಿಗೆ ಯಾವುದೇ ಅನ್ಯಾಯವಾಗಿಲ್ಲ. ಸಿಆರ್ಪಿಸಿ ಸೆಕ್ಷನ್ 482 ಅಡಿಯಲ್ಲಿ ದೋಷಾರೋಪಪಟ್ಟಿ ನಿರಾಕರಣೆ ಮಾಡಲು ಆಗುವುದಿಲ್ಲ’ ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>