ವಿಚಾರಣೆ ವೇಳೆ ಅರ್ಜಿದಾರ ವಕೀಲ ಎನ್.ಪಿ.ಅಮೃತೇಶ್ ಪರ ವಾದ ಮಂಡಿಸಿದ ವಕೀಲ ಎಂ.ಅರುಣ್ ಶ್ಯಾಮ್ ಅವರು, ‘ಸುಧಾಕರ್ ಅಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸಭಾಧ್ಯಕ್ಷರ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ಕೆಲವರು ಅವರನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಕುರಿತು ಎಫ್ಐಆರ್ ದಾಖಲಾಗಿದೆ. ಆದರೆ, ಸಮಗ್ರ ತನಿಖೆ ನಡೆಯುತ್ತಿಲ್ಲ’ ಎಂದು ವಿವರಿಸಿದರು.