ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಲೋಕಾಯುಕ್ತ–ಸಮ್ಮತಿ ನೀಡಿರಲಿಲ್ಲ: ಹೈಕೋರ್ಟ್‌ ಸಿ.ಜೆ

Last Updated 30 ನವೆಂಬರ್ 2019, 20:14 IST
ಅಕ್ಷರ ಗಾತ್ರ

ಬೆಂಗಳೂರು: ‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡುವ ಮುನ್ನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಅನುಮತಿ ನೀಡಿಲ್ಲ’ ಎಂಬ ಅಂಶ ಬಹಿರಂಗವಾಗಿದೆ.

ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ವಿವರ ಒದಗಿಸುವಂತೆ, ನಗರದ ಬನಶಂಕರಿ ಬಡಾವಣೆ ನಿವಾಸಿ ಡಾ.ಕೆ.ಶಿವರಾಂ ಕೇಳಿದ್ದ ವಿವರಣೆಗೆ ರಾಜ್ಯ ಮಾಹಿತಿ ಅಧಿಕಾರಿಯೂ ಆದ ಹೈಕೋರ್ಟ್‌ನ ಜಂಟಿ ನಿರ್ದೇಶಕರು ಶನಿವಾರ ನೀಡಿರುವ ಮಾಹಿತಿಯಲ್ಲಿ ತಿಳಿಸಿದ್ದಾರೆ.

‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡುವ ಮುನ್ನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಸಮ್ಮತಿ ನೀಡಿದ ಪ್ರತಿಯನ್ನು ಒದಗಿಸಿ’ ಎಂದು ಕೇಳಲಾದ ಮಾಹಿತಿಗೆ, ‘ಅಂತಹ ಯಾವುದೇ ಸಮ್ಮತಿ ಪತ್ರವನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನೀಡಿರುವುದಿಲ್ಲ’ ಎಂದು ತಿಳಿಸಲಾಗಿದೆ.

14 ವರ್ಷಗಳ ಕಾಲ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಪಾಟೀಲ ಅವರು 2019ರ ನ.21ರಂದು ಉಪಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT