<p><strong>ಬೆಂಗಳೂರು:</strong> ‘ಇವತ್ತು ವಕೀಲರಿಗೆ ನೋಟಿಸ್ ಕೊಡುತ್ತಾರೆ. ನಾಳೆ ಜಡ್ಜ್ಗೂ ಠಾಣೆಗೆ ಬನ್ನಿ ಅಂತಾರೆ. ಈ ಪೊಲೀಸರ ಕೆಲಸ ಏನು, ಇವರು ಮಾಡ್ತಿರೋದೇನು, ಇದೇನು ಕರ್ನಾಟಕವೋ ಇಲ್ಲಾ ಬಿಹಾರವೋ...?</p>.<p>ರಾಜ್ಯ ಪ್ರಾಸಿಕ್ಯೂಷನ್ ಅನ್ನು ಇಂದು ಬೆಳಗ್ಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಪರಿ ಇದು.</p>.<p>‘ಸ್ಥಿರಾಸ್ತಿ ವ್ಯಾಜ್ಯವೊಂದರಲ್ಲಿ ವಕೀಲರು ಪೊಲೀಸ್ ಠಾಣೆಗೆ ಖುದ್ದು ಹಾಜರಾಗಿ ದಾಖಲಾತಿ ನೀಡಬೇಕು’ ಎಂದು ವಕೀಲ ಬಿ.ಸುಧಾಕರ್ ಅವರಿಗೆ, ವಿಜಯನಗರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೋಟಿಸ್ ನೀಡಿದ್ದರು.</p>.<p>ಇದನ್ನು ಪ್ರಶ್ನಿಸಿ ಸುಧಾಕರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರವಿ ವಾದ ಮಂಡಿಸಿ, ಪೊಲೀಸ್ ಅಧಿಕಾರಿಗಳು ಹೇಗೆ ಕಾನೂನು ಬಾಹಿರವಾಗಿ ಅರ್ಜಿದಾರ ವಕೀಲರಿಗೆ ಸಿ.ಆರ್.ಪಿ.ಸಿ. ಕಲಂ 91ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ ಎಂಬುದನ್ನು ವಿವರಿಸಿದರು.</p>.<p>ಇದನ್ನು ಆಲಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ವಿಚಾರಣೆಗೆ ಖುದ್ದು ಹಾಜರಾಗಿದ್ದ ವಿಜಯನಗರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ.ಎಚ್.ಸಂತೋಷ್ ಹಾಗೂ ಮತ್ತೊಬ್ಬ ಅಧಿಕಾರಿ ಎಂ.ಎಂ.ಭರತ್ ಬೆವರಿಳಿಸಿದರು.</p>.<p>‘ತಮ್ಮ ರಕ್ತ ಕೊಟ್ಟು ಪೊಲೀಸ್ ಇಲಾಖೆ ಗೌರವ ಹೆಚ್ಚಿಸಿದ ಅನೇಕ ಅಧಿಕಾರಿಗಳಿದ್ದಾರೆ. ಆದರೆ, ನಿಮ್ಮಂಥವರು ಸಾರ್ವಜನಿಕರ ರಕ್ತ ಹೀರಿ ಮಾಂಸ ತಿನ್ನಲು ಕುಳಿತಿದ್ದೀರಾ, ಕೋರ್ಟ್ ಇದನ್ನೆಲ್ಲಾ ನೋಡಿಕೊಂಡು ಸುಮ್ಮನೇ ಕೂರಲು ಆಗುವುದಿಲ್ಲ. ಮಧ್ಯಾಹ್ನದೊಳಗೆ ಈ ಅಧಿಕಾರಿಗಳು ಬೇಷರತ್ ಕ್ಷಮಾಪಣೆ ಕೇಳಬೇಕು. ಅದಕ್ಕಾಗಿ ಪ್ರಮಾಣ ಪತ್ರ ಸಲ್ಲಿಸಬೇಕು’ ಎಂದು ಪ್ರಾಸಿಕ್ಯೂಷನ್ ವಕೀಲರಿಗೆ ತಾಕೀತು ಮಾಡಿದರು.<br /><br />ಅರ್ಜಿದಾರರ ಪರ ಮತ್ತೊಬ್ಬ ವಕೀಲ ಡಿ. ಆರ್.ರವಿಶಂಕರ್, ‘ಈ ಪ್ರಕರಣ ಗಂಭೀರವಾದದ್ದು. ಇದನ್ನು ಹೀಗೆಯೇ ಬಿಡಬಾರದು. ಈ ಅಧಿಕಾರಿಗಳು ನಡೆದುಕೊಂಡಿರುವ ರೀತಿಯನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ವಿಚಾರಣೆ ನಡೆಸಲು ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಪ್ರಾಸಿಕ್ಯೂಷನ್ ಪರ ವಕೀಲರಿಗೆ, ‘ನಿಮ್ಮ ಪೊಲೀಸ್ ಕಮಿಷನರ್ ಯಾರು, ಅವರು ಇದಕ್ಕೆ ಉತ್ತರಿಸಬೇಕು. ಈ ಬಗ್ಗೆ ವಿವರವಾದ ಆದೇಶ ಮಾಡುತ್ತೇನೆ’ ಎಂದು ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಇವತ್ತು ವಕೀಲರಿಗೆ ನೋಟಿಸ್ ಕೊಡುತ್ತಾರೆ. ನಾಳೆ ಜಡ್ಜ್ಗೂ ಠಾಣೆಗೆ ಬನ್ನಿ ಅಂತಾರೆ. ಈ ಪೊಲೀಸರ ಕೆಲಸ ಏನು, ಇವರು ಮಾಡ್ತಿರೋದೇನು, ಇದೇನು ಕರ್ನಾಟಕವೋ ಇಲ್ಲಾ ಬಿಹಾರವೋ...?</p>.<p>ರಾಜ್ಯ ಪ್ರಾಸಿಕ್ಯೂಷನ್ ಅನ್ನು ಇಂದು ಬೆಳಗ್ಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಪರಿ ಇದು.</p>.<p>‘ಸ್ಥಿರಾಸ್ತಿ ವ್ಯಾಜ್ಯವೊಂದರಲ್ಲಿ ವಕೀಲರು ಪೊಲೀಸ್ ಠಾಣೆಗೆ ಖುದ್ದು ಹಾಜರಾಗಿ ದಾಖಲಾತಿ ನೀಡಬೇಕು’ ಎಂದು ವಕೀಲ ಬಿ.ಸುಧಾಕರ್ ಅವರಿಗೆ, ವಿಜಯನಗರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೋಟಿಸ್ ನೀಡಿದ್ದರು.</p>.<p>ಇದನ್ನು ಪ್ರಶ್ನಿಸಿ ಸುಧಾಕರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರವಿ ವಾದ ಮಂಡಿಸಿ, ಪೊಲೀಸ್ ಅಧಿಕಾರಿಗಳು ಹೇಗೆ ಕಾನೂನು ಬಾಹಿರವಾಗಿ ಅರ್ಜಿದಾರ ವಕೀಲರಿಗೆ ಸಿ.ಆರ್.ಪಿ.ಸಿ. ಕಲಂ 91ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ ಎಂಬುದನ್ನು ವಿವರಿಸಿದರು.</p>.<p>ಇದನ್ನು ಆಲಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ವಿಚಾರಣೆಗೆ ಖುದ್ದು ಹಾಜರಾಗಿದ್ದ ವಿಜಯನಗರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ.ಎಚ್.ಸಂತೋಷ್ ಹಾಗೂ ಮತ್ತೊಬ್ಬ ಅಧಿಕಾರಿ ಎಂ.ಎಂ.ಭರತ್ ಬೆವರಿಳಿಸಿದರು.</p>.<p>‘ತಮ್ಮ ರಕ್ತ ಕೊಟ್ಟು ಪೊಲೀಸ್ ಇಲಾಖೆ ಗೌರವ ಹೆಚ್ಚಿಸಿದ ಅನೇಕ ಅಧಿಕಾರಿಗಳಿದ್ದಾರೆ. ಆದರೆ, ನಿಮ್ಮಂಥವರು ಸಾರ್ವಜನಿಕರ ರಕ್ತ ಹೀರಿ ಮಾಂಸ ತಿನ್ನಲು ಕುಳಿತಿದ್ದೀರಾ, ಕೋರ್ಟ್ ಇದನ್ನೆಲ್ಲಾ ನೋಡಿಕೊಂಡು ಸುಮ್ಮನೇ ಕೂರಲು ಆಗುವುದಿಲ್ಲ. ಮಧ್ಯಾಹ್ನದೊಳಗೆ ಈ ಅಧಿಕಾರಿಗಳು ಬೇಷರತ್ ಕ್ಷಮಾಪಣೆ ಕೇಳಬೇಕು. ಅದಕ್ಕಾಗಿ ಪ್ರಮಾಣ ಪತ್ರ ಸಲ್ಲಿಸಬೇಕು’ ಎಂದು ಪ್ರಾಸಿಕ್ಯೂಷನ್ ವಕೀಲರಿಗೆ ತಾಕೀತು ಮಾಡಿದರು.<br /><br />ಅರ್ಜಿದಾರರ ಪರ ಮತ್ತೊಬ್ಬ ವಕೀಲ ಡಿ. ಆರ್.ರವಿಶಂಕರ್, ‘ಈ ಪ್ರಕರಣ ಗಂಭೀರವಾದದ್ದು. ಇದನ್ನು ಹೀಗೆಯೇ ಬಿಡಬಾರದು. ಈ ಅಧಿಕಾರಿಗಳು ನಡೆದುಕೊಂಡಿರುವ ರೀತಿಯನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ವಿಚಾರಣೆ ನಡೆಸಲು ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಪ್ರಾಸಿಕ್ಯೂಷನ್ ಪರ ವಕೀಲರಿಗೆ, ‘ನಿಮ್ಮ ಪೊಲೀಸ್ ಕಮಿಷನರ್ ಯಾರು, ಅವರು ಇದಕ್ಕೆ ಉತ್ತರಿಸಬೇಕು. ಈ ಬಗ್ಗೆ ವಿವರವಾದ ಆದೇಶ ಮಾಡುತ್ತೇನೆ’ ಎಂದು ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>