<p>ಬೆಂಗಳೂರು: ವಿದ್ಯಾರ್ಥಿಗಳು ಶಾಲೆಗೆ ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಬಸ್ಕಿ ಹೊಡೆಸುವ, ಶಾಲೆಯ ಆವರಣ ಸುತ್ತು ಹಾಕುವ ಶಿಕ್ಷೆ ನೀಡಿದ ಆರೋಪದಡಿ ಶಾಲೆಯ ಪ್ರಾಂಶುಪಾಲರು ಮತ್ತು ಇತರೆ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.</p>.<p>ಈ ಸಂಬಂಧ ಯಲಹಂಕದ ಚೈತನ್ಯ ಟೆಕ್ನೋ ಶಾಲೆಯ ಪ್ರಾಂಶುಪಾಲರಾದ ಮೀನಾಕ್ಷಿ ವಿನೋದಿನಿ, ಶಿಕ್ಷಕರಾದ ನರೇಶ್, ಕೆ.ಭರತ್ ಕುಮಾರ್ ಮತ್ತು ಎಸ್.ಶ್ರೀನಿವಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅರ್ನವ್ ಬಾಗಲವಾಡಿ ಅವರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಗೆ ಮಧ್ಯಂತರ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.</p>.<p>ಪ್ರಕರಣವೇನು?: 'ಏಳನೇ ತರಗತಿಯಿಂದ 10ನೇ ತರಗತಿಯ ಏಳು ವಿದ್ಯಾರ್ಥಿಗಳು ಇದೇ 13ರಂದು ಶಾಲೆಗೆ ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಅವರನ್ನು ತರಗತಿಗೆ ಸೇರಿಸದೇ ಆವರಣದಲ್ಲಿ ನಿಲ್ಲಿಸಲಾಗಿತ್ತು’ ಎಂದು ಯಲಹಂಕ ಉಪನಗರದ ತಿರುಮಲ ನಗರದ ಚೈತನ್ಯ ಟೆಕ್ನೋ ಶಾಲೆಯ ವಿರುದ್ಧ ಆರೋಪ ಹೊರಿಸಲಾಗಿದೆ.</p>.<p>‘ಪ್ರಾಂಶುಪಾಲರಾದ ಮೀನಾಕ್ಷಿ ವಿನೋದಿನಿ, ನರೇಶ್, ಶಿಕ್ಷಕ ಭರತ್, ಶ್ರೀನಿವಾಸ್ ಮಕ್ಕಳಿಗೆ ಶಿಕ್ಷೆ ನೀಡಿದ್ದಾರೆ’ ಎಂಬ ಏಳು ಸಂತ್ರಸ್ತ ವಿದ್ಯಾರ್ಥಿಗಳ ಆರೋಪವನ್ನು ಆಧರಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದರು.</p>.<p>ಈ ದೂರಿನ ಅನ್ವಯ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಅರ್ಜಿದಾರರ ವಿರುದ್ಧ ಬಾಲನ್ಯಾಯ ಕಾಯ್ದೆಯ ಕಲಂ 75, ಭಾರತೀಯ ನ್ಯಾಯ ಸಂಹಿತೆಯ ಕಲಂಗಳಾದ 115(2), 352 ಜೊತೆಗೆ 3(5)ರ ಅಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿದ್ಯಾರ್ಥಿಗಳು ಶಾಲೆಗೆ ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಬಸ್ಕಿ ಹೊಡೆಸುವ, ಶಾಲೆಯ ಆವರಣ ಸುತ್ತು ಹಾಕುವ ಶಿಕ್ಷೆ ನೀಡಿದ ಆರೋಪದಡಿ ಶಾಲೆಯ ಪ್ರಾಂಶುಪಾಲರು ಮತ್ತು ಇತರೆ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.</p>.<p>ಈ ಸಂಬಂಧ ಯಲಹಂಕದ ಚೈತನ್ಯ ಟೆಕ್ನೋ ಶಾಲೆಯ ಪ್ರಾಂಶುಪಾಲರಾದ ಮೀನಾಕ್ಷಿ ವಿನೋದಿನಿ, ಶಿಕ್ಷಕರಾದ ನರೇಶ್, ಕೆ.ಭರತ್ ಕುಮಾರ್ ಮತ್ತು ಎಸ್.ಶ್ರೀನಿವಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅರ್ನವ್ ಬಾಗಲವಾಡಿ ಅವರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಗೆ ಮಧ್ಯಂತರ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.</p>.<p>ಪ್ರಕರಣವೇನು?: 'ಏಳನೇ ತರಗತಿಯಿಂದ 10ನೇ ತರಗತಿಯ ಏಳು ವಿದ್ಯಾರ್ಥಿಗಳು ಇದೇ 13ರಂದು ಶಾಲೆಗೆ ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಅವರನ್ನು ತರಗತಿಗೆ ಸೇರಿಸದೇ ಆವರಣದಲ್ಲಿ ನಿಲ್ಲಿಸಲಾಗಿತ್ತು’ ಎಂದು ಯಲಹಂಕ ಉಪನಗರದ ತಿರುಮಲ ನಗರದ ಚೈತನ್ಯ ಟೆಕ್ನೋ ಶಾಲೆಯ ವಿರುದ್ಧ ಆರೋಪ ಹೊರಿಸಲಾಗಿದೆ.</p>.<p>‘ಪ್ರಾಂಶುಪಾಲರಾದ ಮೀನಾಕ್ಷಿ ವಿನೋದಿನಿ, ನರೇಶ್, ಶಿಕ್ಷಕ ಭರತ್, ಶ್ರೀನಿವಾಸ್ ಮಕ್ಕಳಿಗೆ ಶಿಕ್ಷೆ ನೀಡಿದ್ದಾರೆ’ ಎಂಬ ಏಳು ಸಂತ್ರಸ್ತ ವಿದ್ಯಾರ್ಥಿಗಳ ಆರೋಪವನ್ನು ಆಧರಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದರು.</p>.<p>ಈ ದೂರಿನ ಅನ್ವಯ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಅರ್ಜಿದಾರರ ವಿರುದ್ಧ ಬಾಲನ್ಯಾಯ ಕಾಯ್ದೆಯ ಕಲಂ 75, ಭಾರತೀಯ ನ್ಯಾಯ ಸಂಹಿತೆಯ ಕಲಂಗಳಾದ 115(2), 352 ಜೊತೆಗೆ 3(5)ರ ಅಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>