ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಪ ಹೇಳುವುದನ್ನು ಬಿಡಿ: ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ

ರಸ್ತೆಗುಂಡಿಯಿಂದ ಸಾವು ಪ್ರಕರಣ
Last Updated 15 ಮಾರ್ಚ್ 2022, 21:57 IST
ಅಕ್ಷರ ಗಾತ್ರ

ಬೆಂಗಳೂರು: ‘ರಸ್ತೆ ಗುಂಡಿಗಳ ಅವಘಡದಿಂದ ಜನರು ಸಾವನ್ನಪ್ಪುವ ಕುರಿತ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಗಮನಿಸುವಾಗ ನಮಗೆ ಪಾಪಪ್ರಜ್ಞೆ ಕಾಡುತ್ತದೆ‘ ಎಂದು ಹೈಕೋರ್ಟ್ ವ್ಯಥೆಯನ್ನುಹೊರಹಾಕಿದೆ.

ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸರ್ಕಾರ ಹಾಗೂ ಪಾಲಿಕೆಗೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆನಡೆಸಿತು.

ವಿಚಾರಣೆ ಸಂದರ್ಭದಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿ ಅಶ್ವಿನ್ ಎಂಬುವರು ರಸ್ತೆ ಗುಂಡಿಯ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ವಿಷಯವನ್ನು ಪ್ರಸ್ತಾಪಿಸಿದ ನ್ಯಾಯಪೀಠ, ‘ಮುಂದಿನ ಹದಿನೈದು ದಿನಗಳಲ್ಲಿ ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು.ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಮರೋಪಾದಿಯಲ್ಲಿ ನಡೆಯಬೇಕು. ಈ ವಿಚಾರದಲ್ಲಿ ಬಿಬಿಎಂಪಿ ನೆಪ ಹೇಳುವುದನ್ನು ಬಿಡಬೇಕು‘ ಎಂದು ಪಾಲಿಕೆಗೆ ಖಡಕ್‌ ಎಚ್ಚರಿಕೆ ನೀಡಿ ವಿಚಾರಣೆಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT