<p><strong>ಬೆಂಗಳೂರು</strong>: ‘ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ರಾಷ್ಟ್ರಪತಿ ವಾಪಸ್ ಕರೆಸಿಕೊಳ್ಳಬೇಕು’ ಎಂದು ಕರ್ನಾಟಕ ಜಾಗೃತ ವಕೀಲರ ವೇದಿಕೆ ಒತ್ತಾಯಿಸಿದೆ.</p>.<p>ನಗರದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ವೇದಿಕೆಯು ಈ ಬಗ್ಗೆ ನಿರ್ಣಯ ಅಂಗೀಕರಿಸಿದೆ. ‘ದಲಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲಾಗುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಪಿತೂರಿಗಳಿಗೆ ಪೂರಕವಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ನಿರ್ಣಯದಲ್ಲಿ ಹೇಳಿದೆ.</p>.<p>‘ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕಾಗಿ ಮೀಸಲಾತಿ ಕಲ್ಪಿಸಲು ಕೇಂದ್ರವು ಕಾನೂನು ಜಾರಿಗೆ ತರಬೇಕು. ಇದಕ್ಕೆ ಅಗತ್ಯವಿರುವ ಪ್ರಸ್ತಾವ ಮತ್ತು ಶಿಫಾರಸನ್ನು ರಾಜ್ಯ ಸರ್ಕಾರ ಮಾಡಬೇಕು’ ಎಂದು ಒತ್ತಾಯಿಸಿದೆ.</p>.<p>‘ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ವಕೀಲರ ಜಾಗೃತಿ ಸಭೆ ಆಯೋಜಿಸಲಾಗುವುದು. ಇದೇ 15ರಂದು ರಾಜ್ಯವ್ಯಾಪಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಈ ನಿರ್ಣಯಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು’ ಎಂದು ತಿಳಿಸಿದೆ.</p>.<p>ವಕೀಲರಾದ ಬಾಬಾಸಾಹೇಬ್ ಜಿನರಾಲ್ಕರ್, ವೆಂಕಟೇಶ ವೊರಸೆ, ಎಚ್.ಎ.ಹಾವಿನ್, ಸಾಯಿಬಣ್ಣ, ಕೆ.ಎಚ್. ಮಲ್ಲೇಶಪ್ಪ, ಕರ್ನಾಟಕ ಜಾಗೃತ ವೇದಿಕೆಯ ಎನ್. ಅನಂತನಾಯ್ಕ ಸೇರಿ ಹಲವರು ಸಮಾವೇಶದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ರಾಷ್ಟ್ರಪತಿ ವಾಪಸ್ ಕರೆಸಿಕೊಳ್ಳಬೇಕು’ ಎಂದು ಕರ್ನಾಟಕ ಜಾಗೃತ ವಕೀಲರ ವೇದಿಕೆ ಒತ್ತಾಯಿಸಿದೆ.</p>.<p>ನಗರದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ವೇದಿಕೆಯು ಈ ಬಗ್ಗೆ ನಿರ್ಣಯ ಅಂಗೀಕರಿಸಿದೆ. ‘ದಲಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲಾಗುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಪಿತೂರಿಗಳಿಗೆ ಪೂರಕವಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ನಿರ್ಣಯದಲ್ಲಿ ಹೇಳಿದೆ.</p>.<p>‘ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕಾಗಿ ಮೀಸಲಾತಿ ಕಲ್ಪಿಸಲು ಕೇಂದ್ರವು ಕಾನೂನು ಜಾರಿಗೆ ತರಬೇಕು. ಇದಕ್ಕೆ ಅಗತ್ಯವಿರುವ ಪ್ರಸ್ತಾವ ಮತ್ತು ಶಿಫಾರಸನ್ನು ರಾಜ್ಯ ಸರ್ಕಾರ ಮಾಡಬೇಕು’ ಎಂದು ಒತ್ತಾಯಿಸಿದೆ.</p>.<p>‘ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ವಕೀಲರ ಜಾಗೃತಿ ಸಭೆ ಆಯೋಜಿಸಲಾಗುವುದು. ಇದೇ 15ರಂದು ರಾಜ್ಯವ್ಯಾಪಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಈ ನಿರ್ಣಯಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು’ ಎಂದು ತಿಳಿಸಿದೆ.</p>.<p>ವಕೀಲರಾದ ಬಾಬಾಸಾಹೇಬ್ ಜಿನರಾಲ್ಕರ್, ವೆಂಕಟೇಶ ವೊರಸೆ, ಎಚ್.ಎ.ಹಾವಿನ್, ಸಾಯಿಬಣ್ಣ, ಕೆ.ಎಚ್. ಮಲ್ಲೇಶಪ್ಪ, ಕರ್ನಾಟಕ ಜಾಗೃತ ವೇದಿಕೆಯ ಎನ್. ಅನಂತನಾಯ್ಕ ಸೇರಿ ಹಲವರು ಸಮಾವೇಶದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>