ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಿ ಸೇರಿ ಮೂವರಿಗೆ ಪುಸ್ತಕ ಬಹುಮಾನ ಪ್ರಶಸ್ತಿ

Last Updated 11 ಮಾರ್ಚ್ 2022, 16:03 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಿದ್ದು, ಸಿಂದಗಿಯ ಚನ್ನಪ್ಪ ಕಟ್ಟಿ ಅವರ‘ಅಮೋಘ ಸಿದ್ಧ ಜನಪದ ಮಹಾಕಾವ್ಯ’ ಸೇರಿದಂತೆ ಮೂವರು ಲೇಖಕರ ಕೃತಿಗಳು ಆಯ್ಕೆಯಾಗಿವೆ.

ತುಮಕೂರಿನ ಪಾವಗಡದ ಸುರೇಶ್ ನಾಗಲಮಡಿಕೆ ಅವರ ‘ಹಾಡು ಕಲಿಸಿದ ಹರ’ (ಜನಪದ ಮಹಾಕಾವ್ಯಗಳು: ಸಂಸ್ಕೃತಿ ಸಂಕಥನ) ಹಾಗೂ ಉಡುಪಿಯ ತಲ್ಲೂರು ಶಿವರಾಮ ಶೆಟ್ಟಿ ಅವರ ‘ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು’ ಕೃತಿ ಪುಸ್ತಕ ಬಹುಮಾನಕ್ಕೆ ಭಾಜನವಾಗಿವೆ.

ಈ ಬಹುಮಾನವು ತಲಾ ₹ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯುವ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೇ ಪುಸ್ತಕ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT