ಕಾಂಗ್ರೆಸ್ ನಾಯಕಿ ರಾಣಿ ಸತೀಶ್, ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಶಾಶ್ವತ ಸಂಘ–ಸಂಸ್ಥೆಗಳಿಗೆ ವಾರ್ಷಿಕ ಅನುದಾನವನ್ನು ನಿಯಮಿತವಾಗಿ ನೀಡಬೇಕು. ಲೇಖಕಿಯರ ಸಂಘಕ್ಕೆ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗುವುದು. ಸಮಾಜ ಸುಧಾರಿಸುವ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯದಿಂದ ಆದಾಯ, ಸಂಪತ್ತು ಬರುವುದಿಲ್ಲ. ಆದರೆ, ಸಾಹಿತ್ಯ, ಸಾಹಿತಿಗಳೇ ನಾಡಿನ ಸಂಪತ್ತು’ ಎಂದರು.