<p><strong>ಬೆಂಗಳೂರು:</strong> ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹಾಗೂ ಬಿ. ವೀರಪ್ಪ ಅವರು ಸೋಂಪುರ, ಕಗ್ಗದಾಸಪುರ ಕೆರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಸ್ಥಿತಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಬಿ.ಎಸ್.ಪಾಟೀಲ್ ಅವರು, ಬನಶಂಕರಿ 6ನೇ ಹಂತದಲ್ಲಿರುವ ಸೋಂಪುರ ಕೆರೆ ಹಾಗೂ ಕೆರೆಯ ಪಕ್ಕದಲ್ಲಿರುವ ಅಂಗಧೀರನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಕೆರೆಗೆ ಯಾವುದೇ ನೀರು ಹರಿಯದಂತೆ ಕ್ರಮವಹಿಸಬೇಕು ಹಾಗೂ ಈ ಬಗ್ಗೆ ಕಾಲಕಾಲಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ್ದು, ಕಾರ್ಯಾದೇಶದ ಪ್ರಕಾರ ಅಭಿವೃದ್ಧಿ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ತಿಳಿಸಿದರು.</p>.<p>ಕೆರೆಯ ಒಳ ಭಾಗಕ್ಕೆ ಬೇಲಿ ಹಾಕುವಂತೆ ಸಂಬಂಧಪಟ್ಟ ಜಿ.ಬಿ.ಎ. ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಸ್ಥಳದಲ್ಲಿ ಹಾಜರಿದ್ದ ದೂರುದಾರರು ಕೋರಿದರು. ಸ್ಥಳದಲ್ಲಿದ್ದ ಮುಖ್ಯ ಎಂಜಿನಿಯರ್ಗೆ ಈ ಬಗ್ಗೆ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಲೋಕಾಯುಕ್ತರು ಸೂಚಿಸಿದರು.</p>.<p>ಬನಶಂಕರಿ 6ನೇ ಹಂತದಲ್ಲಿರುವ ಅಂಗಧೀರನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಘಟಕದಲ್ಲಿ ದುರ್ವಾಸನೆ, ನೊಣಗಳ ಕಾಟ, ಲಿಚಿಟ್ ಸಮಸ್ಯೆಯನ್ನು ಕಂಡು ಲೋಕಾಯುಕ್ತರು, ಜಲಮಂಡಳಿ ಹಾಗೂ ಜಿ.ಬಿ.ಎ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಎಲ್ಲಾ ಸಮಸ್ಯೆಯನ್ನು ಪರಿಹರಿಸಿ, ವರದಿ ಸಲ್ಲಿಸುವಂತೆ ತಿಳಿಸಿದರು.</p>.<p>ರಸ್ತೆ ಬದಿಗಳಲ್ಲಿ ಕಸ ಹಾಕಿರುವುದನ್ನು ಗಮನಿಸಿದ ಲೋಕಾಯುಕ್ತರು ಕಸವನ್ನು ತೆರವುಗೊಳಿಸಿ, ಈ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಮೂರು ದಿನದೊಳಗೆ ಸಲ್ಲಿಸುವಂತೆ ಜಿ.ಬಿ.ಎ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸಿ.ವಿ.ರಾಮನಗರದ ಕಗ್ಗದಾಸಪುರ ಕೆರೆಗೆ ಭೇಟಿ ನೀಡಿದರು. ಕೆರೆ ಸುತ್ತಲೂ ಬಫರ್ ವಲಯ ಬಿಟ್ಟಿರಲಿಲ್ಲ. ಕೆರೆಯ ಆವರಣದಲ್ಲಿ ನಿರ್ಮಿಸುತ್ತಿರುವ ಎಸ್.ಟಿ.ಪಿ. ಸಹ ಬಫರ್ ವಲಯದಲ್ಲಿದೆ. ಕೆರೆಯಲ್ಲಿ ಹೂಳು ತೆಗೆಯಲು ₹3 ಕೋಟಿ ವ್ಯಯಿಸಿದ್ದರೂ ಗಿಡಗಂಟಿಗಳು, ಪ್ಲಾಸ್ಟಿಕ್ ವಸ್ತುಗಳು ಇರುವುದು ಕಂಡು ಬಂತು. ಕೆರೆಯ ಆವರಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು, ವಾಯು ವಿಹಾರ ಮಾಡಲು ಬರುವ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಮಲ್ಲೇಶ್ ಪಾಳ್ಯ, ಬಿಇಎಂಎಲ್, ಎಚ್ಎಎಲ್ ಆವರಣದ ಗೋಡೆಗಳ ಎರಡೂ ಬದಿ ಹಾಗೂ ಸಾವಿತ್ರಿ ಬಾಪುಲೆ ಕೌಸಲ್ಯ ಭವನದ ಎದುರು ರಸ್ತೆಯ ಎರಡೂ ಬದಿಗಳಲ್ಲಿ ಕಸ ವಿಲೇವಾರಿ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. </p>.<p>ಆಸ್ಟಿನ್ ಟೌನ್ನಲ್ಲಿರುವ ಕೆಎಸ್ಆರ್ಟಿಸಿ, ಪೊಲೀಸ್ ವಸತಿ ಗೃಹ ಬಳಿ ಇರುವ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಕಸ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹಾಗೂ ಬಿ. ವೀರಪ್ಪ ಅವರು ಸೋಂಪುರ, ಕಗ್ಗದಾಸಪುರ ಕೆರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಸ್ಥಿತಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಬಿ.ಎಸ್.ಪಾಟೀಲ್ ಅವರು, ಬನಶಂಕರಿ 6ನೇ ಹಂತದಲ್ಲಿರುವ ಸೋಂಪುರ ಕೆರೆ ಹಾಗೂ ಕೆರೆಯ ಪಕ್ಕದಲ್ಲಿರುವ ಅಂಗಧೀರನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಕೆರೆಗೆ ಯಾವುದೇ ನೀರು ಹರಿಯದಂತೆ ಕ್ರಮವಹಿಸಬೇಕು ಹಾಗೂ ಈ ಬಗ್ಗೆ ಕಾಲಕಾಲಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ್ದು, ಕಾರ್ಯಾದೇಶದ ಪ್ರಕಾರ ಅಭಿವೃದ್ಧಿ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ತಿಳಿಸಿದರು.</p>.<p>ಕೆರೆಯ ಒಳ ಭಾಗಕ್ಕೆ ಬೇಲಿ ಹಾಕುವಂತೆ ಸಂಬಂಧಪಟ್ಟ ಜಿ.ಬಿ.ಎ. ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಸ್ಥಳದಲ್ಲಿ ಹಾಜರಿದ್ದ ದೂರುದಾರರು ಕೋರಿದರು. ಸ್ಥಳದಲ್ಲಿದ್ದ ಮುಖ್ಯ ಎಂಜಿನಿಯರ್ಗೆ ಈ ಬಗ್ಗೆ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಲೋಕಾಯುಕ್ತರು ಸೂಚಿಸಿದರು.</p>.<p>ಬನಶಂಕರಿ 6ನೇ ಹಂತದಲ್ಲಿರುವ ಅಂಗಧೀರನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಘಟಕದಲ್ಲಿ ದುರ್ವಾಸನೆ, ನೊಣಗಳ ಕಾಟ, ಲಿಚಿಟ್ ಸಮಸ್ಯೆಯನ್ನು ಕಂಡು ಲೋಕಾಯುಕ್ತರು, ಜಲಮಂಡಳಿ ಹಾಗೂ ಜಿ.ಬಿ.ಎ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಎಲ್ಲಾ ಸಮಸ್ಯೆಯನ್ನು ಪರಿಹರಿಸಿ, ವರದಿ ಸಲ್ಲಿಸುವಂತೆ ತಿಳಿಸಿದರು.</p>.<p>ರಸ್ತೆ ಬದಿಗಳಲ್ಲಿ ಕಸ ಹಾಕಿರುವುದನ್ನು ಗಮನಿಸಿದ ಲೋಕಾಯುಕ್ತರು ಕಸವನ್ನು ತೆರವುಗೊಳಿಸಿ, ಈ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಮೂರು ದಿನದೊಳಗೆ ಸಲ್ಲಿಸುವಂತೆ ಜಿ.ಬಿ.ಎ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸಿ.ವಿ.ರಾಮನಗರದ ಕಗ್ಗದಾಸಪುರ ಕೆರೆಗೆ ಭೇಟಿ ನೀಡಿದರು. ಕೆರೆ ಸುತ್ತಲೂ ಬಫರ್ ವಲಯ ಬಿಟ್ಟಿರಲಿಲ್ಲ. ಕೆರೆಯ ಆವರಣದಲ್ಲಿ ನಿರ್ಮಿಸುತ್ತಿರುವ ಎಸ್.ಟಿ.ಪಿ. ಸಹ ಬಫರ್ ವಲಯದಲ್ಲಿದೆ. ಕೆರೆಯಲ್ಲಿ ಹೂಳು ತೆಗೆಯಲು ₹3 ಕೋಟಿ ವ್ಯಯಿಸಿದ್ದರೂ ಗಿಡಗಂಟಿಗಳು, ಪ್ಲಾಸ್ಟಿಕ್ ವಸ್ತುಗಳು ಇರುವುದು ಕಂಡು ಬಂತು. ಕೆರೆಯ ಆವರಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು, ವಾಯು ವಿಹಾರ ಮಾಡಲು ಬರುವ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಮಲ್ಲೇಶ್ ಪಾಳ್ಯ, ಬಿಇಎಂಎಲ್, ಎಚ್ಎಎಲ್ ಆವರಣದ ಗೋಡೆಗಳ ಎರಡೂ ಬದಿ ಹಾಗೂ ಸಾವಿತ್ರಿ ಬಾಪುಲೆ ಕೌಸಲ್ಯ ಭವನದ ಎದುರು ರಸ್ತೆಯ ಎರಡೂ ಬದಿಗಳಲ್ಲಿ ಕಸ ವಿಲೇವಾರಿ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. </p>.<p>ಆಸ್ಟಿನ್ ಟೌನ್ನಲ್ಲಿರುವ ಕೆಎಸ್ಆರ್ಟಿಸಿ, ಪೊಲೀಸ್ ವಸತಿ ಗೃಹ ಬಳಿ ಇರುವ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಕಸ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>