ಸುಪ್ರೀಂ ಕೋರ್ಟ್ 2022ರಲ್ಲಿ ಅಂದಿನ ಅವಿಭಜಿತ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಉಂಟಾದ ಪರಿಸರ ಹಾನಿಯಿಂದ ಹಾಳಾದ ಪ್ರದೇಶಗಳ ಪುನಶ್ಚೇತನಕ್ಕೆ ವಿಶೇಷ ಉದ್ದೇಶಗಳ ನಿಗಮವಾಗಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ರೂಪಿಸಿ, ನಿಗಮದ ಕೆಲಸ ಕಾರ್ಯಗಳ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ನೇಮಿಸಿತ್ತು.