ಆಕ್ರೋಶ ಹೆಚ್ಚಾದ ಮೇಲೆ ಸ್ಪಷ್ಟನೆ ನೀಡಿರುವ ಡಿಸಿಪಿ ಬಾಬಾ ಅವರು, ‘28ರ ಆದೇಶ ಕೆಲವರು ವಿಭಿನ್ನ ರೀತಿಯಲ್ಲಿ ಅರ್ಥೈಸಿಕೊಂಡಿದ್ದರಿಂದ ಗೊಂದಲ ಉಂಟಾಗಿದೆ. ಕರ್ನಾಟಕ ರಾಜ್ಯೋತ್ಸವ, ಸೂಕ್ಷ್ಮ ಬಂದೋಬಸ್ತ್ ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕ ದೃಷ್ಟಿಯಿಂದ ಜ್ಞಾಪನಾ ಪತ್ರ ನೀಡಲಾಗಿತ್ತು. ಅಧಿಕಾರಿಗಳು ಸಕಾರಣವಿಲ್ಲದೆ ದೀರ್ಘಕಾಲಿಕ ರಜೆಯ ಮೇಲೆ ತೆರಳುವುದನ್ನು ತಾತ್ಕಾಲಿಕವಾಗಿ ಮುಂದೂಡುವ ಉದ್ದೇಶ ಹಾಗೂ ಕಚೇರಿಯ ಆಂತರಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಅಧಿಕಾರಿಗಳಿಗೆ ಮಾತ್ರ ಈ ಪತ್ರ ನೀಡಲಾಗಿತ್ತು’ ಎಂದು ಹೇಳಿದ್ದಾರೆ.