‘ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ರಾಜ್ಯ ಎಲ್ಲ ಠಾಣೆಗಳ ಸಿಬ್ಬಂದಿಗೆ ಪೊಲೀಸ್ ನಡವಳಿಕೆ ಕುರಿತು ಸ್ಪಷ್ಟ ಸಂದೇಶದ ಸುತ್ತೋಲೆ ಹೊರಡಿಸಬೇಕು. ಈ ವಿಚಾರವಾಗಿ ಸದ್ಯದಲ್ಲಿಯೇ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಲಿದ್ದೇವೆ. ಪೊಲೀಸರನ್ನು ಭ್ರಷ್ಟ ಅಧಿಕಾರಿಗಳ ಮತ್ತು ರಾಜಕಾರಣಿಗಳ ಗುಲಾಮಗಿರಿ ಮತ್ತು ಕಪಿಮುಷ್ಠಿಯಿಂದ ಹೊರಗೆ ತಂದು ಪ್ರಾಮಾಣಿಕ, ದಕ್ಷ, ಸ್ವಾವಲಂಬಿ, ಕರ್ತವ್ಯನಿಷ್ಠರನ್ನಾಗಿ ಮಾಡಬೇಕು ಎನ್ನುವುದು ನಮ್ಮ ಗುರಿ’ ಎಂದೂ ಅವರು ತಿಳಿಸಿದ್ದಾರೆ.