ಸ್ವಚ್ಛ ಹಾಗೂ ಸುಂದರ ಬೆಂಗಳೂರು, ಸಿಲಿಕಾನ್ ಸಿಟಿ ಎಂಬೆಲ್ಲ ಘೋಷಣೆಗಳು ಸಂಪೂರ್ಣ ಬೋಗಸ್ ಎನ್ನುವುದನ್ನು ಈ ಮಹಾಮಳೆ ಬಯಲು ಮಾಡಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೇ ಇಲ್ಲದ ಮಹಾನಗರ ಪಾಲಿಕೆ, ಮಳೆಯಲ್ಲಿ ಬಡವರು, ಮಧ್ಯಮ ವರ್ಗದ ಬದುಕು ಕೊಚ್ಚಿ ಹೋಗುತ್ತಿದ್ದರೂ ಕುಂಭಕರ್ಣ ನಿದ್ದೆಗೆ ಶರಣಾದ ಆಧಿಕಾರಿಗಳು, ಇದು ಬೆಂಗಳೂರಿನ ದುರವಸ್ಥೆ ಅಲ್ಲ, ಮಹಾ ದುರಂತ ಎಂದು ಅವರು ಹೇಳಿದ್ದಾರೆ.