<p><strong>ಬೆಂಗಳೂರು:</strong> ಸಚಿವರ ಮಧ್ಯದಕಿತ್ತಾಟವೇ ಬೆಂಗಳೂರು ಅಭಿವೃದ್ಧಿಗೆ ಕಂಟಕವಾಗಿದೆ ಎಂದು ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಟಿ.ಎ. ಶರವಣ ಟೀಕಿಸಿದ್ದಾರೆ.</p>.<p>ಬೆಂಗಳೂರನ್ನು ಪ್ರತಿನಿಧಿಸುವ ಏಳು ಮಂತ್ರಿಗಳು ಏಳು ದಿಕ್ಕಿಗೆ ಮುಖ ಮಾಡಿ, ಸಮನ್ವಯದಿಂದ ಕೆಲಸವನ್ನೇ ಮಾಡದೇ ಬೆಂಗಳೂರು ದುರಂತಕ್ಕೆ ಕೊಡುಗೆ ನೀಡುತ್ತಿದ್ದಾರೆ. ಮಂತ್ರಿಗಳ ದಂಡೆ ಇದ್ದರೂ ಜನ ನರಳುತ್ತಿರುವುದು ವಿಷಾದಕರ ಎಂದು ಅವರು ಹೇಳಿದ್ದಾರೆ.</p>.<p>ಸ್ವಚ್ಛ ಹಾಗೂ ಸುಂದರ ಬೆಂಗಳೂರು, ಸಿಲಿಕಾನ್ ಸಿಟಿ ಎಂಬೆಲ್ಲ ಘೋಷಣೆಗಳು ಸಂಪೂರ್ಣ ಬೋಗಸ್ ಎನ್ನುವುದನ್ನು ಈ ಮಹಾಮಳೆ ಬಯಲು ಮಾಡಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೇ ಇಲ್ಲದ ಮಹಾನಗರ ಪಾಲಿಕೆ, ಮಳೆಯಲ್ಲಿ ಬಡವರು, ಮಧ್ಯಮ ವರ್ಗದ ಬದುಕು ಕೊಚ್ಚಿ ಹೋಗುತ್ತಿದ್ದರೂ ಕುಂಭಕರ್ಣ ನಿದ್ದೆಗೆ ಶರಣಾದ ಆಧಿಕಾರಿಗಳು, ಇದು ಬೆಂಗಳೂರಿನ ದುರವಸ್ಥೆ ಅಲ್ಲ, ಮಹಾ ದುರಂತ ಎಂದು ಅವರು ಹೇಳಿದ್ದಾರೆ.</p>.<p>‘ಭೂಗಳ್ಳರು, ಅಕ್ರಮ ಲೇ ಔಟ್ ಕಳ್ಳರು, ಕೆರೆ ಕಬಳಿಕೆ ಕೇಡಿಗಳ ಪಡೆ ಬೆಂಗಳೂರಿನ ಈ ಸ್ಥಿತಿಗೆ ಕಾರಣ. ಬೆಂಗಳೂರು ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಗ್ಗೆ ತನಿಖೆಗೆ ಆದೇಶ ಕೊಟ್ಟರೆ ಬಡಾವಣೆಗಳಿಗೆ ನೀರು ನುಗ್ಗುವ ರಹಸ್ಯ ಬಯಲಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಚಿವರ ಮಧ್ಯದಕಿತ್ತಾಟವೇ ಬೆಂಗಳೂರು ಅಭಿವೃದ್ಧಿಗೆ ಕಂಟಕವಾಗಿದೆ ಎಂದು ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಟಿ.ಎ. ಶರವಣ ಟೀಕಿಸಿದ್ದಾರೆ.</p>.<p>ಬೆಂಗಳೂರನ್ನು ಪ್ರತಿನಿಧಿಸುವ ಏಳು ಮಂತ್ರಿಗಳು ಏಳು ದಿಕ್ಕಿಗೆ ಮುಖ ಮಾಡಿ, ಸಮನ್ವಯದಿಂದ ಕೆಲಸವನ್ನೇ ಮಾಡದೇ ಬೆಂಗಳೂರು ದುರಂತಕ್ಕೆ ಕೊಡುಗೆ ನೀಡುತ್ತಿದ್ದಾರೆ. ಮಂತ್ರಿಗಳ ದಂಡೆ ಇದ್ದರೂ ಜನ ನರಳುತ್ತಿರುವುದು ವಿಷಾದಕರ ಎಂದು ಅವರು ಹೇಳಿದ್ದಾರೆ.</p>.<p>ಸ್ವಚ್ಛ ಹಾಗೂ ಸುಂದರ ಬೆಂಗಳೂರು, ಸಿಲಿಕಾನ್ ಸಿಟಿ ಎಂಬೆಲ್ಲ ಘೋಷಣೆಗಳು ಸಂಪೂರ್ಣ ಬೋಗಸ್ ಎನ್ನುವುದನ್ನು ಈ ಮಹಾಮಳೆ ಬಯಲು ಮಾಡಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೇ ಇಲ್ಲದ ಮಹಾನಗರ ಪಾಲಿಕೆ, ಮಳೆಯಲ್ಲಿ ಬಡವರು, ಮಧ್ಯಮ ವರ್ಗದ ಬದುಕು ಕೊಚ್ಚಿ ಹೋಗುತ್ತಿದ್ದರೂ ಕುಂಭಕರ್ಣ ನಿದ್ದೆಗೆ ಶರಣಾದ ಆಧಿಕಾರಿಗಳು, ಇದು ಬೆಂಗಳೂರಿನ ದುರವಸ್ಥೆ ಅಲ್ಲ, ಮಹಾ ದುರಂತ ಎಂದು ಅವರು ಹೇಳಿದ್ದಾರೆ.</p>.<p>‘ಭೂಗಳ್ಳರು, ಅಕ್ರಮ ಲೇ ಔಟ್ ಕಳ್ಳರು, ಕೆರೆ ಕಬಳಿಕೆ ಕೇಡಿಗಳ ಪಡೆ ಬೆಂಗಳೂರಿನ ಈ ಸ್ಥಿತಿಗೆ ಕಾರಣ. ಬೆಂಗಳೂರು ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಗ್ಗೆ ತನಿಖೆಗೆ ಆದೇಶ ಕೊಟ್ಟರೆ ಬಡಾವಣೆಗಳಿಗೆ ನೀರು ನುಗ್ಗುವ ರಹಸ್ಯ ಬಯಲಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>