‘ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನದಲ್ಲಿಯೂ ಸರ್ಕಾರ ಶೇ 40 ಕಮಿಷನ್ ಪಡೆಯುತ್ತಿದೆ. ಗಂಗಾ ಕಲ್ಯಾಣ ಯೋಜನೆ ಹಗರಣ ಇದಕ್ಕೊಂದು ನಿದರ್ಶನ. ಹಲವು ಯೋಜನೆಗಳನ್ನು ಕೈಬಿಟ್ಟಿರುವ ಸರ್ಕಾರ, ಸಹಾಯಧನಗಳನ್ನು ನಿಲ್ಲಿಸಿವೆ. ಬಡವರಿಗೆ ಕೊಟ್ಟ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ’ ಎಂದ ಅವರು, ‘ಬಜೆಟ್ ಗಾತ್ರದಲ್ಲಿ ಜನಸಂಖ್ಯೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.