<p><strong>ಬೆಂಗಳೂರು:</strong> ‘ಮೊಟ್ಟೆ ಎಸೆದ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪರೀಕ್ಷೆ ಮಾಡಿದ್ದ ದೊಡ್ಡ ಡಾಕ್ಟರ್, ಕೂದಲು ಸುಟ್ಟಿದೆ ಎಂದಿದ್ದರು. ನಿನ್ನೆ ಅವರ ವಿಡಿಯೊದಲ್ಲಿ ಕೂದಲು ಇತ್ತು. ಅದು ಹೇಗೆ ವಾಪಸ್ ಬಂತು’ ಎಂದು ಸಂಸದ ಡಿ.ಕೆ. ಸುರೇಶ್ ಪ್ರಶ್ನಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುನಿರತ್ನ ಅವರು ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಅವರ ಮನೆಯಿಂದ ಹೊರಗೆ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದಾಗ ಅವರಿಗೆ ಕೂದಲು ಇತ್ತು. ತಲೆಗೆ ಟೋಪನ್ ಹಾಕಿದ್ದಾರೋ ಅಥವಾ ನಿಜವಾದ ಕೂದಲು ಇಟ್ಟುಕೊಂಡಿದ್ದಾರೋ ಪರೀಕ್ಷೆಯಾಗಲಿ’ ಎಂದು ಹೇಳಿದರು.</p>.<p>‘ಬಿಜೆಪಿ ಶಾಸಕರು, ನನ್ನ ಮೇಲೆ, ನನ್ನ ಸಹೋದರ ಹಾಗೂ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹಾಗೂ ಅವರ ತಂದೆ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಈ ವಿಡಿಯೊ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆ್ಯಸಿಡ್ ದಾಳಿ ಎಂದ ಮೂರು ಸೆಕೆಂಡ್ನಲ್ಲಿ ಮೊಟ್ಟೆ ಎಸೆಯಲಾಗಿದೆ. ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ನಿರ್ಮಾಪಕ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ. ಮುನಿರತ್ನ ಅಭಿನಯದ ‘ಆ್ಯಸಿಡ್ ಮೊಟ್ಟೆ’ ಸಿನಿಮಾವನ್ನು ನೂರು ದಿನ ಓಡಿಸಿ’ ಎಂದರು.</p>.<p>‘ಈ ಪ್ರಕರಣವನ್ನು ಸಿಬಿಐಗೆ ನೀಡಲಿ. ಅವರೇ ಗೃಹಮಂತ್ರಿಗೆ ಪತ್ರ ಬರೆದು ಎಸ್ಪಿಜಿ ಭದ್ರತೆಯನ್ನೇ ಪಡೆಯಲಿ. ಅವರ ಬಳಿಯಿದ್ದ ರಘು ಎಂಬ ಚಾಲಕ ಏನಾದ ಎಂದು ತಿಳಿಯಬೇಕಲ್ಲವೇ? ಮತ್ತೊಬ್ಬ ಮಲ್ಲತ್ತಹಳ್ಳಿ ರಂಜಿತ್ ಎಂಬ ಹುಡುಗನ ಕೈ- ಕಾಲು ಮುರಿಯಲಾಗಿದೆ. ಈ ಪ್ರಕರಣಗಳ ಬಗ್ಗೆಯೂ ಸಿಬಿಐ ತನಿಖೆಯಾಗಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮೊಟ್ಟೆ ಎಸೆದ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪರೀಕ್ಷೆ ಮಾಡಿದ್ದ ದೊಡ್ಡ ಡಾಕ್ಟರ್, ಕೂದಲು ಸುಟ್ಟಿದೆ ಎಂದಿದ್ದರು. ನಿನ್ನೆ ಅವರ ವಿಡಿಯೊದಲ್ಲಿ ಕೂದಲು ಇತ್ತು. ಅದು ಹೇಗೆ ವಾಪಸ್ ಬಂತು’ ಎಂದು ಸಂಸದ ಡಿ.ಕೆ. ಸುರೇಶ್ ಪ್ರಶ್ನಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುನಿರತ್ನ ಅವರು ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಅವರ ಮನೆಯಿಂದ ಹೊರಗೆ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದಾಗ ಅವರಿಗೆ ಕೂದಲು ಇತ್ತು. ತಲೆಗೆ ಟೋಪನ್ ಹಾಕಿದ್ದಾರೋ ಅಥವಾ ನಿಜವಾದ ಕೂದಲು ಇಟ್ಟುಕೊಂಡಿದ್ದಾರೋ ಪರೀಕ್ಷೆಯಾಗಲಿ’ ಎಂದು ಹೇಳಿದರು.</p>.<p>‘ಬಿಜೆಪಿ ಶಾಸಕರು, ನನ್ನ ಮೇಲೆ, ನನ್ನ ಸಹೋದರ ಹಾಗೂ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹಾಗೂ ಅವರ ತಂದೆ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಈ ವಿಡಿಯೊ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆ್ಯಸಿಡ್ ದಾಳಿ ಎಂದ ಮೂರು ಸೆಕೆಂಡ್ನಲ್ಲಿ ಮೊಟ್ಟೆ ಎಸೆಯಲಾಗಿದೆ. ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ನಿರ್ಮಾಪಕ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ. ಮುನಿರತ್ನ ಅಭಿನಯದ ‘ಆ್ಯಸಿಡ್ ಮೊಟ್ಟೆ’ ಸಿನಿಮಾವನ್ನು ನೂರು ದಿನ ಓಡಿಸಿ’ ಎಂದರು.</p>.<p>‘ಈ ಪ್ರಕರಣವನ್ನು ಸಿಬಿಐಗೆ ನೀಡಲಿ. ಅವರೇ ಗೃಹಮಂತ್ರಿಗೆ ಪತ್ರ ಬರೆದು ಎಸ್ಪಿಜಿ ಭದ್ರತೆಯನ್ನೇ ಪಡೆಯಲಿ. ಅವರ ಬಳಿಯಿದ್ದ ರಘು ಎಂಬ ಚಾಲಕ ಏನಾದ ಎಂದು ತಿಳಿಯಬೇಕಲ್ಲವೇ? ಮತ್ತೊಬ್ಬ ಮಲ್ಲತ್ತಹಳ್ಳಿ ರಂಜಿತ್ ಎಂಬ ಹುಡುಗನ ಕೈ- ಕಾಲು ಮುರಿಯಲಾಗಿದೆ. ಈ ಪ್ರಕರಣಗಳ ಬಗ್ಗೆಯೂ ಸಿಬಿಐ ತನಿಖೆಯಾಗಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>