<p><strong>ಬೆಂಗಳೂರು</strong>: ಜನಸಾಮಾನ್ಯರು ಎದುರಿಸುತ್ತಿರುವ 15 ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ‘ಸಂಯುಕ್ತ ಹೋರಾಟ– ಕರ್ನಾಟಕ’ ಸಮಿತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.</p>.<p>ಕೇಂದ್ರ–ರಾಜ್ಯ ಸರ್ಕಾರಗಳ ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟನಕಾರರು ಖಂಡಿಸಿದರು. ‘ಬೆಂಗಳೂರು ಚಲೋ’ಗೆ ರಾಜ್ಯದ ವಿವಿಧ ಭಾಗದಿಂದ ಹೋರಾಟಗಾರರು ಹಾಗೂ ರೈತರು ಬಂದಿದ್ದರು. ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. </p>.<p>ಕರ್ನಾಟಕ ಜನಶಕ್ತಿ ಅಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, ‘ರಾಜ್ಯದಲ್ಲಿ ಸಮಸ್ಯೆಗಳ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ, ಪರಿಹಾರ ಮಾತ್ರ ಸಿಗುತ್ತಿಲ್ಲ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಿಜೆಪಿ ಜಾರಿ ಮಾಡಿರುವ ಎಲ್ಲ ಜನವಿರೋಧಿ ಕಾನೂನುಗಳನ್ನು ರದ್ದು ಮಾಡುತ್ತೇವೆಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಆದರೆ, ಕೊಟ್ಟ ಮಾತು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರ ಅಲ್ಲ’ ಎಂದು ಆಕ್ರೋಶ ಹೊರಹಾಕಿದರು.</p>.<p>ರೈತ ಸಂಘದ ಮುಖಂಡ ಎಚ್.ಆರ್. ಬಸವರಾಜಪ್ಪ ಮಾತನಾಡಿ, ‘ರಾಮನಗರ ಜಿಲ್ಲಾಧಿಕಾರಿ ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಅವರ ವರ್ತನೆ ಅದೇ ರೀತಿಯಲ್ಲಿ ಮುಂದುವರಿದರೆ ಆಯಾ ಜಿಲ್ಲೆಗಳಲ್ಲಿ ಬೃಹತ್ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಪ್ರಾಧ್ಯಾಪಕ ಬಾಬು ಮ್ಯಾಥ್ಯು ಮಾತನಾಡಿ, ‘ಸಂವಿಧಾನವನ್ನು ನಾಶ ಪಡಿಸುವ ಹಲವು ಹುನ್ನಾರಗಳನ್ನು ನಡೆಸಲಾಗುತ್ತಿದೆ. ಸಂವಿಧಾನ ನಂಬಿಕೊಂಡಿರುವ ರೈತರು–ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>‘ಕಾರ್ಮಿಕರ ಎನ್ನುವ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಕಾನೂನಾತ್ಮಕ ಹೋರಾಟ ಮಾಡಲು ಸಾಧ್ಯವಿಲ್ಲ. ಹೋರಾಟ ಮಾಡಿದರೆ, ಅದು ಕಾನೂನುಬಾಹಿರ ಆಗುತ್ತದೆ. ಕಾರ್ಮಿಕ ಸಂಘಟನೆಗಳು ನಿಷೇಧ ಆಗುತ್ತವೆ’ ಎಂದು ಎಚ್ಚರಿಸಿದರು.</p>.<p>ಹೋರಾಟದಲ್ಲಿ ಬಡಗಲಪುರ ನಾಗೇಂದ್ರ, ಯು.ಬಸವರಾಜು, ಮೀನಾಕ್ಷಿ ಸುಂದರಂ, ಕುಮಾರ್ ಸಮತಳ, ಕೆ.ವಿ.ಭಟ್, ವರಲಕ್ಷ್ಮಿ, ಮೈತ್ರೇಯಿ, ಟಿ.ಯಶವಂತ, ಸುಷ್ಮಾ ಪಾಲ್ಗೊಂಡಿದ್ದರು.</p>.<p>ಪ್ರತಿಭಟನೆಯ ಬಳಿಕ ರೈತರು ಹಾಗೂ ಹೋರಾಟಗಾರರನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.</p> <p> ಹಕ್ಕೊತ್ತಾಯಗಳು </p><p>* ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಮತ್ತು ಶ್ರಮ ಶಕ್ತಿ ನೀತಿ–2025 ರದ್ದುಪಡಿಸಬೇಕು </p><p>* ಬಗರ್ಹುಕುಂ ಜಮೀನು ಸಾಗುವಳಿ ರೈತರಿಗೆ ಭೂಮಿ ಮಂಜೂರು ಮಾಡಬೇಕು </p><p>* ದೇವನಹಳ್ಳಿ ಭೂಸ್ವಾಧೀನ ರದ್ದು ಘೋಷಣೆಯನ್ನು ತಕ್ಷಣವೇ ಗೆಜೆಟ್ನಲ್ಲಿ ಪ್ರಕಟಿಸಬೇಕು </p><p>* ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಆತಂಕದಿಂದ ಪಾರು ಮಾಡಬೇಕು</p><p> * ಎಲ್ಲ ಆದಿವಾಸಿ ಅರಣ್ಯವಾಸಿಗಳಿಗೆ ಭೂಮಿಹಕ್ಕು ನೀಡಬೇಕು</p><p> * ಸರ್ಜಾಪುರ ಹೋಬಳಿಯ ಆಂದೇನಳ್ಳಿ ಮುತ್ತೆನಲ್ಲೂರು ಸೊಳ್ಳೆಪುರ ಗ್ರಾಮಗಳಲ್ಲಿ ಫಲವತ್ತಾದ ಜಮೀನು ಸ್ವಾಧೀನ ಕೈಬಿಡಬೇಕು </p><p>* ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಸಾಮಾನ್ಯರು ಎದುರಿಸುತ್ತಿರುವ 15 ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ‘ಸಂಯುಕ್ತ ಹೋರಾಟ– ಕರ್ನಾಟಕ’ ಸಮಿತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.</p>.<p>ಕೇಂದ್ರ–ರಾಜ್ಯ ಸರ್ಕಾರಗಳ ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟನಕಾರರು ಖಂಡಿಸಿದರು. ‘ಬೆಂಗಳೂರು ಚಲೋ’ಗೆ ರಾಜ್ಯದ ವಿವಿಧ ಭಾಗದಿಂದ ಹೋರಾಟಗಾರರು ಹಾಗೂ ರೈತರು ಬಂದಿದ್ದರು. ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. </p>.<p>ಕರ್ನಾಟಕ ಜನಶಕ್ತಿ ಅಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, ‘ರಾಜ್ಯದಲ್ಲಿ ಸಮಸ್ಯೆಗಳ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ, ಪರಿಹಾರ ಮಾತ್ರ ಸಿಗುತ್ತಿಲ್ಲ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಿಜೆಪಿ ಜಾರಿ ಮಾಡಿರುವ ಎಲ್ಲ ಜನವಿರೋಧಿ ಕಾನೂನುಗಳನ್ನು ರದ್ದು ಮಾಡುತ್ತೇವೆಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಆದರೆ, ಕೊಟ್ಟ ಮಾತು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರ ಅಲ್ಲ’ ಎಂದು ಆಕ್ರೋಶ ಹೊರಹಾಕಿದರು.</p>.<p>ರೈತ ಸಂಘದ ಮುಖಂಡ ಎಚ್.ಆರ್. ಬಸವರಾಜಪ್ಪ ಮಾತನಾಡಿ, ‘ರಾಮನಗರ ಜಿಲ್ಲಾಧಿಕಾರಿ ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಅವರ ವರ್ತನೆ ಅದೇ ರೀತಿಯಲ್ಲಿ ಮುಂದುವರಿದರೆ ಆಯಾ ಜಿಲ್ಲೆಗಳಲ್ಲಿ ಬೃಹತ್ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಪ್ರಾಧ್ಯಾಪಕ ಬಾಬು ಮ್ಯಾಥ್ಯು ಮಾತನಾಡಿ, ‘ಸಂವಿಧಾನವನ್ನು ನಾಶ ಪಡಿಸುವ ಹಲವು ಹುನ್ನಾರಗಳನ್ನು ನಡೆಸಲಾಗುತ್ತಿದೆ. ಸಂವಿಧಾನ ನಂಬಿಕೊಂಡಿರುವ ರೈತರು–ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>‘ಕಾರ್ಮಿಕರ ಎನ್ನುವ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಕಾನೂನಾತ್ಮಕ ಹೋರಾಟ ಮಾಡಲು ಸಾಧ್ಯವಿಲ್ಲ. ಹೋರಾಟ ಮಾಡಿದರೆ, ಅದು ಕಾನೂನುಬಾಹಿರ ಆಗುತ್ತದೆ. ಕಾರ್ಮಿಕ ಸಂಘಟನೆಗಳು ನಿಷೇಧ ಆಗುತ್ತವೆ’ ಎಂದು ಎಚ್ಚರಿಸಿದರು.</p>.<p>ಹೋರಾಟದಲ್ಲಿ ಬಡಗಲಪುರ ನಾಗೇಂದ್ರ, ಯು.ಬಸವರಾಜು, ಮೀನಾಕ್ಷಿ ಸುಂದರಂ, ಕುಮಾರ್ ಸಮತಳ, ಕೆ.ವಿ.ಭಟ್, ವರಲಕ್ಷ್ಮಿ, ಮೈತ್ರೇಯಿ, ಟಿ.ಯಶವಂತ, ಸುಷ್ಮಾ ಪಾಲ್ಗೊಂಡಿದ್ದರು.</p>.<p>ಪ್ರತಿಭಟನೆಯ ಬಳಿಕ ರೈತರು ಹಾಗೂ ಹೋರಾಟಗಾರರನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.</p> <p> ಹಕ್ಕೊತ್ತಾಯಗಳು </p><p>* ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಮತ್ತು ಶ್ರಮ ಶಕ್ತಿ ನೀತಿ–2025 ರದ್ದುಪಡಿಸಬೇಕು </p><p>* ಬಗರ್ಹುಕುಂ ಜಮೀನು ಸಾಗುವಳಿ ರೈತರಿಗೆ ಭೂಮಿ ಮಂಜೂರು ಮಾಡಬೇಕು </p><p>* ದೇವನಹಳ್ಳಿ ಭೂಸ್ವಾಧೀನ ರದ್ದು ಘೋಷಣೆಯನ್ನು ತಕ್ಷಣವೇ ಗೆಜೆಟ್ನಲ್ಲಿ ಪ್ರಕಟಿಸಬೇಕು </p><p>* ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಆತಂಕದಿಂದ ಪಾರು ಮಾಡಬೇಕು</p><p> * ಎಲ್ಲ ಆದಿವಾಸಿ ಅರಣ್ಯವಾಸಿಗಳಿಗೆ ಭೂಮಿಹಕ್ಕು ನೀಡಬೇಕು</p><p> * ಸರ್ಜಾಪುರ ಹೋಬಳಿಯ ಆಂದೇನಳ್ಳಿ ಮುತ್ತೆನಲ್ಲೂರು ಸೊಳ್ಳೆಪುರ ಗ್ರಾಮಗಳಲ್ಲಿ ಫಲವತ್ತಾದ ಜಮೀನು ಸ್ವಾಧೀನ ಕೈಬಿಡಬೇಕು </p><p>* ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>