ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ ಎಂಬ ತಕರಾರಿನೊಂದಿಗೆ ನವೆಂಬರ್ 15ರ ಅಧಿಸೂಚನೆಯನ್ನೇ ರದ್ದುಗೊಳಿಸಿ ಆಯೋಗದ ಕಾರ್ಯದರ್ಶಿ ಜನವರಿ 9ರಂದು ಅಧಿಸೂಚನೆ ಹೊರಡಿಸಿದ್ದರು. ಶುಕ್ರವಾರ ಸಭೆ ನಡೆಸಿರುವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಮತ್ತು ಸದಸ್ಯರು, ಜ.9ರಂದು ಕಾರ್ಯದರ್ಶಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿದ್ದಾರೆ.