ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತೆ ಪೂರ್ಣಿಮಾ, ಸೈಯದ್‌ ಇಸಾಕ್‌ ಅವರಿಗೆ ಪ್ರಶಸ್ತಿ: ಪ್ರಕಾಶಕರ ಸಂಘದ ಆಯ್ಕೆ

ಕರ್ನಾಟಕ ಪ್ರಕಾಶಕರ ಸಂಘದಿಂದ ಆಯ್ಕೆ
Last Updated 19 ಏಪ್ರಿಲ್ 2021, 21:17 IST
ಅಕ್ಷರ ಗಾತ್ರ

ಬೆಂಗಳೂರು:ವಿಶ್ವ ಪುಸ್ತಕ ದಿನದ ಅಂಗವಾಗಿ ಕರ್ನಾಟಕ ಪ್ರಕಾಶಕರ ಸಂಘದಿಂದ ನೀಡಲಾಗುವ ‘ಎಂ.ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾಲಕ ಪ್ರಶಸ್ತಿ’ಗೆಮೈಸೂರಿನ ಪುಸ್ತಕ ಪ್ರೇಮಿ ಸೈಯದ್‌ ಇಸಾಕ್‌ ಹಾಗೂ ‘ನಂಜನಗೂಡು ತಿರುಮಲಾಂಬ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತೆ ಹಾಗೂ ಪ್ರಕಾಶಕಿ ಆರ್.ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ.

‘ಅಂಕಿತ ಪ್ರಕಾಶನ ಹಾಗೂ ಶೃಂಗಾರ ಪ್ರಕಾಶನ ಪ್ರಾಯೋಜಿಸಿರುವ ಈ ಪ್ರಶಸ್ತಿಗಳು ತಲಾ ₹5 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿವೆ.’

‘ವಿಶ್ವ ಪುಸ್ತಕ ದಿನದ ಪ್ರಯುಕ್ತ ಏ.23ರಂದುಬೆಳಿಗ್ಗೆ 11.30ಕ್ಕೆ ಸೆಂಟ್ರಲ್‌ ಕಾಲೇಜಿನ ಕೇಂದ್ರ ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕವಿ ಸಿದ್ಧಲಿಂಗಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದುಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರು ಪ್ರಕಾಶ್‌ ಕಂಬತ್ತಳ್ಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT