<p><strong>ಬೆಂಗಳೂರು</strong>: ರಾಜ್ಯದ ವಿವಿಧೆಡೆ ಶುಕ್ರವಾರವೂ 40ರಿಂದ 50 ಕಿ.ಮೀ. ವೇಗದಲ್ಲಿ ನಿರಂತರ ಗಾಳಿಯ ಜತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. </p>.<p>ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.</p>.<p>ಕರಾವಳಿ ಉದ್ದಕ್ಕೂ ಬಿರುಗಾಳಿಯ ಆರ್ಭಟ ಹೆಚ್ಚಿರುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು. ಸಣ್ಣ ಹಡಗುಗಳು ಸಂಚರಿಸಬಾರದು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಅಲೆಗಳು ಉಲ್ಬಣಿಸುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.</p>.<p>ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿ ಕಾಣಿಸಿಕೊಳ್ಳುವ ಸಂಭವವೂ ಇದೆ ಎಂದು ಇಲಾಖೆ ಹೇಳಿದೆ.</p>.<p>ಕರಾವಳಿ ಭಾಗದಲ್ಲಿ ಜುಲೈ 1ರವರೆಗೂ ಗಾಳಿಯೊಂದಿಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದ ಇಲಾಖೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ವಿವಿಧೆಡೆ ಶುಕ್ರವಾರವೂ 40ರಿಂದ 50 ಕಿ.ಮೀ. ವೇಗದಲ್ಲಿ ನಿರಂತರ ಗಾಳಿಯ ಜತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. </p>.<p>ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.</p>.<p>ಕರಾವಳಿ ಉದ್ದಕ್ಕೂ ಬಿರುಗಾಳಿಯ ಆರ್ಭಟ ಹೆಚ್ಚಿರುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು. ಸಣ್ಣ ಹಡಗುಗಳು ಸಂಚರಿಸಬಾರದು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಅಲೆಗಳು ಉಲ್ಬಣಿಸುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.</p>.<p>ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿ ಕಾಣಿಸಿಕೊಳ್ಳುವ ಸಂಭವವೂ ಇದೆ ಎಂದು ಇಲಾಖೆ ಹೇಳಿದೆ.</p>.<p>ಕರಾವಳಿ ಭಾಗದಲ್ಲಿ ಜುಲೈ 1ರವರೆಗೂ ಗಾಳಿಯೊಂದಿಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದ ಇಲಾಖೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>