ಹೆಸರಘಟ್ಟ: ಇಲ್ಲಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್ಆರ್) ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಸಮಾರಂಭದಲ್ಲಿ ಸಂಗೀತ ನಿರ್ದೇಶಕ ವಿ. ಮನೋಹರ್ ಅವರಿಗೆ ‘ಕನ್ನಡ ಕಂಪು’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಭಾಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಸ್ಥೆಯ ಪ್ರಭಾರ ನಿರ್ದೇಶಕ ಪ್ರಕಾಶ್ ಪಾಟೀಲ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಎಚ್.ಎಲ್. ಲಕ್ಷ್ಮಣ್, ಉಪಾಧ್ಯಕ್ಷ ಪಿ ನಂದೀಶ್, ಕಾರ್ಯದರ್ಶಿ ಎನ್. ಲೋಕೇಶ್, ಉಪ ಕಾರ್ಯದರ್ಶಿ ಓಂಕಾರ್ ನಾಯಕ್ ಇದ್ದರು.