‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಡಲಾದ ಹಣವನ್ನು ಸರ್ಕಾರದ ಇತರೆ ಇಲಾಖೆಗಳಿಗೆ ಮತ್ತು ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವ ಪ್ರಯತ್ನ ನಡೆಸಿತ್ತು. ಆದರೆ ಈಗ ಇದೇ ಹಣವನ್ನು ಲೂಟಿ ಮಾಡಲಾಗಿದ್ದು, ಚುನಾವಣೆಗೆ ಬಳಸಿಕೊಳ್ಳಲಾಗಿದೆ. ದಲಿತ, ಪರಿಶಿಷ್ಟ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ದಮನಿತರ ಶ್ರೇಯೋಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದ ಸರ್ಕಾರ, ಅವರಿಗಾಗಿ ಮೀಸಲಿಟ್ಟಿರುವ ಹಣವನ್ನು ದೋಚುತ್ತಿದೆ’ ಎಂದು ದೂರಿದ್ದಾರೆ.