ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕಾಮಾಕ್ಷಿಪಾಳ್ಯದ ಧನಂಜಯ ಪ್ಯಾಲೇಸ್ನಲ್ಲಿ ಆ.10 ರಂದು ಬೆಳಿಗ್ಗೆ 10.30ಕ್ಕೆ ಪಕ್ಷದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಸ್ವಾತಂತ್ರ್ಯ ಹೋರಾಟಗಾರ
ಎಚ್.ಎಸ್.ದೊರೆಸ್ವಾಮಿ ಉದ್ಘಾಟಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ ಹಾಗೂ ಸುಪ್ರೀಂ ಕೋರ್ಟ್ ವಕೀಲ ಕೆ.ವಿ. ಧನಂಜಯ ಭಾಗವಹಿಸಲಿದ್ದಾರೆ’ ಎಂದರು.