<p><strong>ಬೆಂಗಳೂರು:</strong> ‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ರಚಿಸಿರುವ ನಿವೃತ್ತ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ನೀಡಿರುವ ಹೇಳಿಕೆ ಖಂಡನೀಯ. ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ. </p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಕಿರಣ್ ಕೊತ್ತಗೆರೆ, ‘ವರದಿ ಜಾರಿಗೆ ಸಚಿವರು ಹಾಗೂ ಶಾಸಕರ ಮನೆ ಮುಂದೆ ಧರಣಿ ಸತ್ಯಾಗ್ರಹ ಹಾಗೂ ಹೋರಾಟ ನಡೆಸುವಂತೆ ಮುನಿಯಪ್ಪ ಅವರು ಸ್ವಜಾತಿಯವರಿಗೆ ಕರೆ ನೀಡಿದ್ದಾರೆ. ಈ ವರದಿ ಪರಿಶಿಷ್ಟ ಸಮುದಾಯದ ಒಗ್ಗಟ್ಟನ್ನು ಛಿದ್ರಗೊಳಿಸಲಿದೆ. ಮುನಿಯಪ್ಪ ಅವರು ಸ್ವಪಕ್ಷೀಯ ಸಚಿವರು ಹಾಗೂ ಶಾಸಕರ ವಿರುದ್ಧ ಜನಾಂಗವನ್ನು ಎತ್ತಿ ಕಟ್ಟುವ ಪಿತೂರಿ ನಡೆಸುತ್ತಿರುವುದು ರಾಜಕೀಯ ದ್ರೋಹ. ಆದ್ದರಿಂದ ಇವರನ್ನು ವಜಾ ಮಾಡಬೇಕು’ ಎಂದು ಒತ್ತಾಯಿಸಿದರು. </p>.ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ರಚಿಸಿರುವ ನಿವೃತ್ತ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ನೀಡಿರುವ ಹೇಳಿಕೆ ಖಂಡನೀಯ. ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ. </p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಕಿರಣ್ ಕೊತ್ತಗೆರೆ, ‘ವರದಿ ಜಾರಿಗೆ ಸಚಿವರು ಹಾಗೂ ಶಾಸಕರ ಮನೆ ಮುಂದೆ ಧರಣಿ ಸತ್ಯಾಗ್ರಹ ಹಾಗೂ ಹೋರಾಟ ನಡೆಸುವಂತೆ ಮುನಿಯಪ್ಪ ಅವರು ಸ್ವಜಾತಿಯವರಿಗೆ ಕರೆ ನೀಡಿದ್ದಾರೆ. ಈ ವರದಿ ಪರಿಶಿಷ್ಟ ಸಮುದಾಯದ ಒಗ್ಗಟ್ಟನ್ನು ಛಿದ್ರಗೊಳಿಸಲಿದೆ. ಮುನಿಯಪ್ಪ ಅವರು ಸ್ವಪಕ್ಷೀಯ ಸಚಿವರು ಹಾಗೂ ಶಾಸಕರ ವಿರುದ್ಧ ಜನಾಂಗವನ್ನು ಎತ್ತಿ ಕಟ್ಟುವ ಪಿತೂರಿ ನಡೆಸುತ್ತಿರುವುದು ರಾಜಕೀಯ ದ್ರೋಹ. ಆದ್ದರಿಂದ ಇವರನ್ನು ವಜಾ ಮಾಡಬೇಕು’ ಎಂದು ಒತ್ತಾಯಿಸಿದರು. </p>.ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>