<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಾರ್ಚ್ 12 ಮತ್ತು 13ರಂದು ರಾಮನಗರದ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ‘ಕನ್ನಡ ಸಾಹಿತ್ಯ ಮತ್ತು ಬೇಸಾಯದ ಬದುಕು’ ಶೀರ್ಷಿಕೆಯಡಿ ಎರಡು ದಿನಗಳ ಶಿಬಿರ ಹಮ್ಮಿಕೊಂಡಿದೆ.</p>.<p>ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಹಯೋಗದಲ್ಲಿ ಈ ಶಿಬಿರ ಹಮ್ಮಿಕೊಂಡಿದೆ. 18 ವರ್ಷಗಳು ಮೇಲ್ಪಟ್ಟ ಸಾಹಿತ್ಯಾಸಕ್ತರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. 50 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಶಿಬಿರದ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ. ಪ್ರಮಾಣಪತ್ರವನ್ನೂ ವಿತರಿಸಲಾಗುತ್ತದೆ. </p>.<p>ಆಸಕ್ತರು ಮಾರ್ಚ್ 01ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಶಿಬಿರದ ಸೂಚನೆಗಳು ಮತ್ತು ನಿಬಂಧನೆಗಳು ಅಕಾಡೆಮಿ ವೆಬ್ಸೈಟ್ <a href="https://sahithyaacademy.karnataka.gov.in/">https://sahithyaacademy.karnataka.gov.in/</a> ನಲ್ಲಿ ಲಭ್ಯವಿದೆ. </p>.<p>ವಿವರಕ್ಕೆ ಕಾರ್ಯಕ್ರಮದ ಸಂಚಾಲಕ ರವಿಕುಮಾರ ಬಾಗಿ (8496849992) ಅಥವಾ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. (9740370473) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಾರ್ಚ್ 12 ಮತ್ತು 13ರಂದು ರಾಮನಗರದ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ‘ಕನ್ನಡ ಸಾಹಿತ್ಯ ಮತ್ತು ಬೇಸಾಯದ ಬದುಕು’ ಶೀರ್ಷಿಕೆಯಡಿ ಎರಡು ದಿನಗಳ ಶಿಬಿರ ಹಮ್ಮಿಕೊಂಡಿದೆ.</p>.<p>ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಸಹಯೋಗದಲ್ಲಿ ಈ ಶಿಬಿರ ಹಮ್ಮಿಕೊಂಡಿದೆ. 18 ವರ್ಷಗಳು ಮೇಲ್ಪಟ್ಟ ಸಾಹಿತ್ಯಾಸಕ್ತರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. 50 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಶಿಬಿರದ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ. ಪ್ರಮಾಣಪತ್ರವನ್ನೂ ವಿತರಿಸಲಾಗುತ್ತದೆ. </p>.<p>ಆಸಕ್ತರು ಮಾರ್ಚ್ 01ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಶಿಬಿರದ ಸೂಚನೆಗಳು ಮತ್ತು ನಿಬಂಧನೆಗಳು ಅಕಾಡೆಮಿ ವೆಬ್ಸೈಟ್ <a href="https://sahithyaacademy.karnataka.gov.in/">https://sahithyaacademy.karnataka.gov.in/</a> ನಲ್ಲಿ ಲಭ್ಯವಿದೆ. </p>.<p>ವಿವರಕ್ಕೆ ಕಾರ್ಯಕ್ರಮದ ಸಂಚಾಲಕ ರವಿಕುಮಾರ ಬಾಗಿ (8496849992) ಅಥವಾ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. (9740370473) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>