<p><strong>ಬೆಂಗಳೂರು</strong>: ‘ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 10 ಮತ್ತು 11ನೇ ಘಟಿಕೋತ್ಸವ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಲಿದ್ದು, 1,004 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಅಹಲ್ಯಾ ಎಸ್. ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಘಟಿಕೋತ್ಸವದಲ್ಲಿ ನಾಲ್ಕು ವಿದ್ವಾಂಸರಿಗೆ ವಿದ್ಯಾವಾಚಸ್ಪತಿ (ಡಿ.ಲಿಟ್) ಪದವಿ ಹಾಗೂ 44 ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾವಾರಿಧಿ (ಪಿಎಚ್.ಡಿ) ಪದವಿ ಪ್ರದಾನ ಮಾಡಲಾಗುವುದು. ಸಂಶೋಧನಾ ವಿದ್ಯಾರ್ಥಿಯೊಬ್ಬರಿಗೆ ಸ್ವರ್ಣ ಪದಕ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘2021–22ನೇ ಶೈಕ್ಷಣಿಕ ಸಾಲಿನಲ್ಲಿ ಆಚಾರ್ಯ (ಎಂ.ಎ) 20, ಶಾಸ್ತ್ರಿ (ಬಿ.ಎ) ಮೂರು ವಿದ್ಯಾರ್ಥಿಗಳು ಸೇರಿದಂತೆ 20 ವಿದ್ಯಾರ್ಥಿಗಳಿಗೆ ಸ್ವರ್ಣ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ. ಒಟ್ಟು 450 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಗುವುದು’ ಎಂದರು.</p>.<p>‘2022–23ನೇ ಶೈಕ್ಷಣಿಕ ಸಾಲಿನಲ್ಲಿ ಆಚಾರ್ಯ (ಎಂ.ಎ) 20, ಶಾಸ್ತ್ರಿ (ಬಿ.ಎ) 3, ಪಿ.ಜಿ. ಡಿಪ್ಲೊಮಾ ಯೋಗ 2 ಹಾಗೂ ಒಬ್ಬ ಪಿಎಚ್.ಡಿ. ವಿದ್ಯಾರ್ಥಿ ಸೇರಿದಂತೆ 26 ಜನರಿಗೆ ಸ್ವರ್ಣ ಪದಕಗಳನ್ನು ನೀಡಲಾಗುವುದು. ಒಟ್ಟು 554 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಗುವುದು’ ಎಂದು ವಿವರಿಸಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮತ್ತು ವಿದ್ವಾಂಸ ಎಚ್.ವಿ. ನಾಗರಾಜರಾವ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. </p>.<p>ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ವಿ. ಗಿರೀಶ್ ಚಂದ್ರ, ಕುಲಸಚಿವ (ಮೌಲ್ಯಮಾಪನ) ಕೆ.ರಾಮಕೃಷ್ಣ ಭಟ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 10 ಮತ್ತು 11ನೇ ಘಟಿಕೋತ್ಸವ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಲಿದ್ದು, 1,004 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಅಹಲ್ಯಾ ಎಸ್. ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಘಟಿಕೋತ್ಸವದಲ್ಲಿ ನಾಲ್ಕು ವಿದ್ವಾಂಸರಿಗೆ ವಿದ್ಯಾವಾಚಸ್ಪತಿ (ಡಿ.ಲಿಟ್) ಪದವಿ ಹಾಗೂ 44 ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾವಾರಿಧಿ (ಪಿಎಚ್.ಡಿ) ಪದವಿ ಪ್ರದಾನ ಮಾಡಲಾಗುವುದು. ಸಂಶೋಧನಾ ವಿದ್ಯಾರ್ಥಿಯೊಬ್ಬರಿಗೆ ಸ್ವರ್ಣ ಪದಕ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘2021–22ನೇ ಶೈಕ್ಷಣಿಕ ಸಾಲಿನಲ್ಲಿ ಆಚಾರ್ಯ (ಎಂ.ಎ) 20, ಶಾಸ್ತ್ರಿ (ಬಿ.ಎ) ಮೂರು ವಿದ್ಯಾರ್ಥಿಗಳು ಸೇರಿದಂತೆ 20 ವಿದ್ಯಾರ್ಥಿಗಳಿಗೆ ಸ್ವರ್ಣ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ. ಒಟ್ಟು 450 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಗುವುದು’ ಎಂದರು.</p>.<p>‘2022–23ನೇ ಶೈಕ್ಷಣಿಕ ಸಾಲಿನಲ್ಲಿ ಆಚಾರ್ಯ (ಎಂ.ಎ) 20, ಶಾಸ್ತ್ರಿ (ಬಿ.ಎ) 3, ಪಿ.ಜಿ. ಡಿಪ್ಲೊಮಾ ಯೋಗ 2 ಹಾಗೂ ಒಬ್ಬ ಪಿಎಚ್.ಡಿ. ವಿದ್ಯಾರ್ಥಿ ಸೇರಿದಂತೆ 26 ಜನರಿಗೆ ಸ್ವರ್ಣ ಪದಕಗಳನ್ನು ನೀಡಲಾಗುವುದು. ಒಟ್ಟು 554 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಗುವುದು’ ಎಂದು ವಿವರಿಸಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮತ್ತು ವಿದ್ವಾಂಸ ಎಚ್.ವಿ. ನಾಗರಾಜರಾವ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. </p>.<p>ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ವಿ. ಗಿರೀಶ್ ಚಂದ್ರ, ಕುಲಸಚಿವ (ಮೌಲ್ಯಮಾಪನ) ಕೆ.ರಾಮಕೃಷ್ಣ ಭಟ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>