‘ಸಚಿವಾಲಯ ಬಂದ್’ಗೆ ಕರೆ ನೀಡಿರುವುದು ಕಾನೂನು ಬಾಹಿರ. ಕಚೇರಿಗೆ ಹಾಜರಾಗಲು ಬರುವ ಅಧಿಕಾರಿ–ಸಿಬ್ಬಂದಿಗೆ ಅಡ್ಡಿಪಡಿಸಿದರೆ ಕ್ರಿಮಿನಲ್ ಮೊಕದ್ದಮೆ ಹೂಡಿ, ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ. ಸಚಿವಾಲಯದ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು. ಒಂದು ವೇಳೆ ಪೂರ್ವಾನುಮತಿ ಪಡೆಯದೇ ಕಚೇರಿಗೆ ಗೈರು ಹಾಜರಾದರೆ ಅದನ್ನು ‘ಲೆಕ್ಕಕ್ಕಿಲ್ಲದ ಅವಧಿ’ ಎಂದು ಪರಿಗಣಿಸಲಾಗುವುದು ಎಂದು ಮುಖ್ಯಕಾರ್ಯದರ್ಶಿ ರವಿಕುಮಾರ್ ಹೇಳಿದ್ದರು.