<p><strong>ಬೆಂಗಳೂರು</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025–26ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಬುಧವಾರ ಘೋಷಿಸಿದೆ.</p>.<p>‘ಬಸವ ರಾಷ್ಟ್ರೀಯ ಪುರಸ್ಕಾರ’ಕ್ಕೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು, ‘ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ’ಗೆ ಮಂಡ್ಯದ ಕಂಬದಹಳ್ಳಿಯ ಜೈನ ಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಭಾಜನರಾಗಿದ್ದಾರೆ. ಈ ಎರಡೂ ಪ್ರಶಸ್ತಿಗಳು ತಲಾ ₹10 ಲಕ್ಷ ನಗದು ಒಳಗೊಂಡಿವೆ. </p>.<p>‘ಪಂಪ ಪ್ರಶಸ್ತಿ’ಗೆ ಸಾಹಿತಿ ದೇವನೂರು ಮಹಾದೇವ (ಮೈಸೂರು), ‘ಸಂಗೊಳ್ಳಿ ರಾಯಣ್ಣ ಪ್ರಶಸ್ತಿ’ಗೆ ಪ್ರಗತಿಪರ ಚಿಂತಕ ಸಿದ್ಧನಗೌಡ ಪಾಟೀಲ (ಧಾರವಾಡ), ‘ಅಕ್ಕಮಹಾದೇವಿ ಪ್ರಶಸ್ತಿ’ಗೆ ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ (ಕಲಬುರಗಿ), ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ’ಗೆ ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ (ತುಮಕೂರು) ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘ಪ್ರೊ.ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ’ಗೆ ಲೇಖಕ ಅಲ್ಲಾಬಕ್ಷ ಮೀರಾಸಾಹೇಬ ಮಿರ್ಜಿ (ವಿಜಯಪುರ), ‘ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ’ಗೆ ಲೇಖಕಿ ಸುಕನ್ಯಾ ಮಾರುತಿ (ಬಳ್ಳಾರಿ), ‘ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ’ಗೆ ಕಲಾವಿದೆ ಜಿ.ವಿ. ಶಾರದಾ (ತುಮಕೂರು), ‘ಬಿ.ವಿ. ಕಾರಂತ ಪ್ರಶಸ್ತಿ’ಗೆ ರಂಗಕರ್ಮಿ ಪ್ರಸನ್ನ (ಶಿವಮೊಗ್ಗ) ಹಾಗೂ ‘ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಗಂಗಾರಾಂ ಚಂಡಾಳ (ಕೋಲಾರ) ಆಯ್ಕೆಯಾಗಿದ್ದಾರೆ.</p>.<p>ಕಲಾ ಪ್ರಶಸ್ತಿ ವಿಭಾಗದಲ್ಲಿ ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಕಲಾವಿದ ವಿ.ಹರಿರಾಮ್ (ಬೆಂಗಳೂರು), ‘ಜಕಣಾಚಾರಿ ಪ್ರಶಸ್ತಿ’ಗೆ ಅಶೋಕ್ ಗುಡಿಗಾರ್ (ಶಿವಮೊಗ್ಗ), ‘ಜಾನಪದ ಶ್ರೀ ಪ್ರಶಸ್ತಿ’ಗೆ ಕಲಾವಿದರಾದ ಎಂ. ಮಹದೇವಸ್ವಾಮಿ (ಮಂಡ್ಯ) ಹಾಗೂ ಬಿ. ಲಕ್ಷ್ಮಣ ಗುತ್ತೇದಾರ (ಯಾದಗಿರಿ) ಆಯ್ಕೆಯಾಗಿದ್ದಾರೆ.</p>.<p>ಸಂಗೀತ–ನೃತ್ಯ ಪ್ರಶಸ್ತಿ ವಿಭಾಗದಲ್ಲಿ ‘ಕುಮಾರವ್ಯಾಸ ಪ್ರಶಸ್ತಿ’ಗೆ ಕಲ್ಲಿನಾಥ ಶಾಸ್ತ್ರಿ (ಗದಗ) ಹಾಗೂ ‘ಶಾಂತಲಾ ನಾಟ್ಯರಾಣಿ ಪ್ರಶಸ್ತಿ’ಗೆ ಪ್ರತಿಭಾ ಪ್ರಹ್ಲಾದ್ (ಮೈಸೂರು) ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು ಒಳಗೊಂಡಿವೆ. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯಾವಕಾಶ ಪಡೆದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಆಯೋಜಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025–26ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಬುಧವಾರ ಘೋಷಿಸಿದೆ.</p>.<p>‘ಬಸವ ರಾಷ್ಟ್ರೀಯ ಪುರಸ್ಕಾರ’ಕ್ಕೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು, ‘ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ’ಗೆ ಮಂಡ್ಯದ ಕಂಬದಹಳ್ಳಿಯ ಜೈನ ಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಭಾಜನರಾಗಿದ್ದಾರೆ. ಈ ಎರಡೂ ಪ್ರಶಸ್ತಿಗಳು ತಲಾ ₹10 ಲಕ್ಷ ನಗದು ಒಳಗೊಂಡಿವೆ. </p>.<p>‘ಪಂಪ ಪ್ರಶಸ್ತಿ’ಗೆ ಸಾಹಿತಿ ದೇವನೂರು ಮಹಾದೇವ (ಮೈಸೂರು), ‘ಸಂಗೊಳ್ಳಿ ರಾಯಣ್ಣ ಪ್ರಶಸ್ತಿ’ಗೆ ಪ್ರಗತಿಪರ ಚಿಂತಕ ಸಿದ್ಧನಗೌಡ ಪಾಟೀಲ (ಧಾರವಾಡ), ‘ಅಕ್ಕಮಹಾದೇವಿ ಪ್ರಶಸ್ತಿ’ಗೆ ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ (ಕಲಬುರಗಿ), ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ’ಗೆ ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ (ತುಮಕೂರು) ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘ಪ್ರೊ.ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ’ಗೆ ಲೇಖಕ ಅಲ್ಲಾಬಕ್ಷ ಮೀರಾಸಾಹೇಬ ಮಿರ್ಜಿ (ವಿಜಯಪುರ), ‘ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ’ಗೆ ಲೇಖಕಿ ಸುಕನ್ಯಾ ಮಾರುತಿ (ಬಳ್ಳಾರಿ), ‘ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ’ಗೆ ಕಲಾವಿದೆ ಜಿ.ವಿ. ಶಾರದಾ (ತುಮಕೂರು), ‘ಬಿ.ವಿ. ಕಾರಂತ ಪ್ರಶಸ್ತಿ’ಗೆ ರಂಗಕರ್ಮಿ ಪ್ರಸನ್ನ (ಶಿವಮೊಗ್ಗ) ಹಾಗೂ ‘ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಗಂಗಾರಾಂ ಚಂಡಾಳ (ಕೋಲಾರ) ಆಯ್ಕೆಯಾಗಿದ್ದಾರೆ.</p>.<p>ಕಲಾ ಪ್ರಶಸ್ತಿ ವಿಭಾಗದಲ್ಲಿ ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಕಲಾವಿದ ವಿ.ಹರಿರಾಮ್ (ಬೆಂಗಳೂರು), ‘ಜಕಣಾಚಾರಿ ಪ್ರಶಸ್ತಿ’ಗೆ ಅಶೋಕ್ ಗುಡಿಗಾರ್ (ಶಿವಮೊಗ್ಗ), ‘ಜಾನಪದ ಶ್ರೀ ಪ್ರಶಸ್ತಿ’ಗೆ ಕಲಾವಿದರಾದ ಎಂ. ಮಹದೇವಸ್ವಾಮಿ (ಮಂಡ್ಯ) ಹಾಗೂ ಬಿ. ಲಕ್ಷ್ಮಣ ಗುತ್ತೇದಾರ (ಯಾದಗಿರಿ) ಆಯ್ಕೆಯಾಗಿದ್ದಾರೆ.</p>.<p>ಸಂಗೀತ–ನೃತ್ಯ ಪ್ರಶಸ್ತಿ ವಿಭಾಗದಲ್ಲಿ ‘ಕುಮಾರವ್ಯಾಸ ಪ್ರಶಸ್ತಿ’ಗೆ ಕಲ್ಲಿನಾಥ ಶಾಸ್ತ್ರಿ (ಗದಗ) ಹಾಗೂ ‘ಶಾಂತಲಾ ನಾಟ್ಯರಾಣಿ ಪ್ರಶಸ್ತಿ’ಗೆ ಪ್ರತಿಭಾ ಪ್ರಹ್ಲಾದ್ (ಮೈಸೂರು) ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು ಒಳಗೊಂಡಿವೆ. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯಾವಕಾಶ ಪಡೆದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಆಯೋಜಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>