<p><strong>ಬೆಂಗಳೂರು: </strong>ನಗರದ ಪ್ರೈಂ ರೋಸ್ ರಸ್ತೆಯಲ್ಲಿ ನಿರ್ಮಿಸಿರುವ ರಾಜ್ಯ ಉಗ್ರಾಣ ನಿಗಮದ ನೂತನ ಆಡಳಿತ ಕಚೇರಿಯ ಕಟ್ಟಡ ‘ಉಗ್ರಾಣ ಭವನ’ವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಉದ್ಘಾಟಿಸಿದರು.</p>.<p>ಉಗ್ರಾಣ ನಿಗಮವರು ಪ್ರೈಂ ರೋಸ್ ರಸ್ತೆಯಲ್ಲಿ ನಾಲ್ಕು ಎಕರೆ ಜಮೀನು ಹೊಂದಿದೆ. ಅಲ್ಲಿ ಇದ್ದ 50 ವರ್ಷಗಳ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ₹ 3.76 ಕೋಟಿ ವೆಚ್ಚದಲ್ಲಿ ನೂತನ ಉಗ್ರಾಣ ಭವನ ನಿರ್ಮಿಸಲಾಗಿದೆ. ನಾಲ್ಕು ಮಹಡಿಗಳ ಹೊಸ ಕಟ್ಟಡ 12,000 ಚದರ ಅಡಿ ವಿಸ್ತೀರ್ಣ ಹೊಂದಿದೆ. ನಿಗಮದ ಕೇಂದ್ರ ಕಚೇರಿ ಹೊಸ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ.</p>.<p>ಸಮಾರಂಭದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ರಾಜ್ಯ ಉಗ್ರಾಣ ನಿಗಮವು ಸಹಕಾರ ಇಲಾಖೆಯ ಅಧೀನದ ಸಂಸ್ಥೆಯಾಗಿದೆ. ರಾಜ್ಯದ ಕೋಟ್ಯಂತರ ರೈತರು ಈ ಸಂಸ್ಥೆಯ ಉಪಯೋಗ ಪಡೆಯುತ್ತಿದ್ದಾರೆ. ದರ ಕುಸಿತದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳನ್ನು ದಾಸ್ತಾನು ಮಾಡಲು ರಿಯಾಯತಿ ದರದಲ್ಲಿ ಸ್ಥಳಾವಕಾಶ ಕಲ್ಪಿಸುತ್ತಿರುವ ನಿಗಮವು, ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ’ ಎಂದರು.</p>.<p>ರಾಜ್ಯದಾದ್ಯಂತ ಇರುವ ನಿಗಮದ ಉಗ್ರಾಣಗಳಲ್ಲಿ ಕಂಪ್ಯೂಟರೀಕೃತ ಆಡಳಿತ ನಿರ್ವಹಣೆ ವ್ಯವಸ್ಥೆ ಜಾರಿಗೆ ತರಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಶೇಕಡ 20ರಷ್ಟು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ರೈತರಿಗೆ ಶೇ 25ರಷ್ಟು ರಿಯಾಯತಿ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ರಾಜ್ಯ ಸರ್ಕಾರವು ರೈತರಿಂದ ಬೆಂಬಲ ಬೆಲೆ ಭತ್ತ, ರಾಗಿ, ಬಿಳಿಜೋಳ, ತೊಗರಿ, ಕಡಲೆ, ಹೆಸರು ಮತ್ತಿತರ ಕೃಷಿ ಉತ್ಪನ್ನಗಳನ್ನು ಖರೀದಿಸುತ್ತಿದೆ. ಆ ಎಲ್ಲ ಉತ್ಪನ್ನಗಳನ್ನೂ ಉಗ್ರಾಣ ನಿಗಮದ ಗೋದಾಮುಗಳಲ್ಲೇ ದಾಸ್ತಾನು ಮಾಡಲಾಗುತ್ತಿದೆ ಎಂದರು.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ. ಬಣಕಾರ, ವ್ಯವಸ್ಥಾಪಕ ನಿರ್ದೇಶಕ ರಿಚರ್ಡ್ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಪ್ರೈಂ ರೋಸ್ ರಸ್ತೆಯಲ್ಲಿ ನಿರ್ಮಿಸಿರುವ ರಾಜ್ಯ ಉಗ್ರಾಣ ನಿಗಮದ ನೂತನ ಆಡಳಿತ ಕಚೇರಿಯ ಕಟ್ಟಡ ‘ಉಗ್ರಾಣ ಭವನ’ವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಉದ್ಘಾಟಿಸಿದರು.</p>.<p>ಉಗ್ರಾಣ ನಿಗಮವರು ಪ್ರೈಂ ರೋಸ್ ರಸ್ತೆಯಲ್ಲಿ ನಾಲ್ಕು ಎಕರೆ ಜಮೀನು ಹೊಂದಿದೆ. ಅಲ್ಲಿ ಇದ್ದ 50 ವರ್ಷಗಳ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ₹ 3.76 ಕೋಟಿ ವೆಚ್ಚದಲ್ಲಿ ನೂತನ ಉಗ್ರಾಣ ಭವನ ನಿರ್ಮಿಸಲಾಗಿದೆ. ನಾಲ್ಕು ಮಹಡಿಗಳ ಹೊಸ ಕಟ್ಟಡ 12,000 ಚದರ ಅಡಿ ವಿಸ್ತೀರ್ಣ ಹೊಂದಿದೆ. ನಿಗಮದ ಕೇಂದ್ರ ಕಚೇರಿ ಹೊಸ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ.</p>.<p>ಸಮಾರಂಭದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ರಾಜ್ಯ ಉಗ್ರಾಣ ನಿಗಮವು ಸಹಕಾರ ಇಲಾಖೆಯ ಅಧೀನದ ಸಂಸ್ಥೆಯಾಗಿದೆ. ರಾಜ್ಯದ ಕೋಟ್ಯಂತರ ರೈತರು ಈ ಸಂಸ್ಥೆಯ ಉಪಯೋಗ ಪಡೆಯುತ್ತಿದ್ದಾರೆ. ದರ ಕುಸಿತದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳನ್ನು ದಾಸ್ತಾನು ಮಾಡಲು ರಿಯಾಯತಿ ದರದಲ್ಲಿ ಸ್ಥಳಾವಕಾಶ ಕಲ್ಪಿಸುತ್ತಿರುವ ನಿಗಮವು, ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ’ ಎಂದರು.</p>.<p>ರಾಜ್ಯದಾದ್ಯಂತ ಇರುವ ನಿಗಮದ ಉಗ್ರಾಣಗಳಲ್ಲಿ ಕಂಪ್ಯೂಟರೀಕೃತ ಆಡಳಿತ ನಿರ್ವಹಣೆ ವ್ಯವಸ್ಥೆ ಜಾರಿಗೆ ತರಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಶೇಕಡ 20ರಷ್ಟು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ರೈತರಿಗೆ ಶೇ 25ರಷ್ಟು ರಿಯಾಯತಿ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ರಾಜ್ಯ ಸರ್ಕಾರವು ರೈತರಿಂದ ಬೆಂಬಲ ಬೆಲೆ ಭತ್ತ, ರಾಗಿ, ಬಿಳಿಜೋಳ, ತೊಗರಿ, ಕಡಲೆ, ಹೆಸರು ಮತ್ತಿತರ ಕೃಷಿ ಉತ್ಪನ್ನಗಳನ್ನು ಖರೀದಿಸುತ್ತಿದೆ. ಆ ಎಲ್ಲ ಉತ್ಪನ್ನಗಳನ್ನೂ ಉಗ್ರಾಣ ನಿಗಮದ ಗೋದಾಮುಗಳಲ್ಲೇ ದಾಸ್ತಾನು ಮಾಡಲಾಗುತ್ತಿದೆ ಎಂದರು.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ. ಬಣಕಾರ, ವ್ಯವಸ್ಥಾಪಕ ನಿರ್ದೇಶಕ ರಿಚರ್ಡ್ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>