<p><strong>ಬೆಂಗಳೂರು</strong>: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದೇ 15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.</p>.<p>ಡಿಸೆಂಬರ್ 14 ರಂದು ಚುನಾವಣೆ ನಡೆಯಲಿದೆ. ಇದೇ 25ರಂದು ಮಧ್ಯಾಹ್ನ 4 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯು 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಪ್ರತಿಭಾ ಆರ್. ತಿಳಿಸಿದ್ದಾರೆ. </p>.<p>ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಘೋಷಿಸಲಾಗುವುದು ಎಂದು ಹೇಳಿದ್ದಾರೆ. </p>.<p>ಸಂಘದ ಮತದಾರರ ಪಟ್ಟಿಯಲ್ಲಿರುವ ವಿಳಾಸಗಳಿಗೆ ಚುನಾವಣಾ ಮಾಹಿತಿಗಳನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ವಿಳಾಸ ಬದಲಾದವರು ಅಥವಾ ಬದಲಾಯಿಸುವರು ಇದೇ 19ರ ಒಳಗೆ ಮೊ.ಸಂಖ್ಯೆ 9945294865ಕ್ಕೆ ಸಂಪರ್ಕಿಸಬೇಕು. ನಂತರ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದೇ 15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.</p>.<p>ಡಿಸೆಂಬರ್ 14 ರಂದು ಚುನಾವಣೆ ನಡೆಯಲಿದೆ. ಇದೇ 25ರಂದು ಮಧ್ಯಾಹ್ನ 4 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯು 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಪ್ರತಿಭಾ ಆರ್. ತಿಳಿಸಿದ್ದಾರೆ. </p>.<p>ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಘೋಷಿಸಲಾಗುವುದು ಎಂದು ಹೇಳಿದ್ದಾರೆ. </p>.<p>ಸಂಘದ ಮತದಾರರ ಪಟ್ಟಿಯಲ್ಲಿರುವ ವಿಳಾಸಗಳಿಗೆ ಚುನಾವಣಾ ಮಾಹಿತಿಗಳನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ವಿಳಾಸ ಬದಲಾದವರು ಅಥವಾ ಬದಲಾಯಿಸುವರು ಇದೇ 19ರ ಒಳಗೆ ಮೊ.ಸಂಖ್ಯೆ 9945294865ಕ್ಕೆ ಸಂಪರ್ಕಿಸಬೇಕು. ನಂತರ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>